ಶ್ರೀ ಕ್ಷೇ.ಧ. ಗ್ರಾ. ಯೋ. ಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರುಗಳ ಸಭೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.)ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರುಗಳ ಸಭೆಯು ವಿಟ್ಲ ಶ್ರೀ ಗಜಾನನ ಸಭಾ ಭವನದಲ್ಲಿ ನಡೆಯಿತು.
![](https://www.suddi9.com/wp-content/uploads/2024/06/IMG-20240624-WA0138-650x488.jpg)
ಉಡುಪಿ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇಗೌಡರವರು ಕಾರ್ಯಕ್ರವನ್ನು ಉದ್ಘಾಟಿಸಿ ಶ್ರೀ ಕ್ಷೇತ್ರದ ಹಿನ್ನೆಲೆ, ಸೇವೆ ಮತ್ತು ಪರಿವರ್ತನೆಯ ಮಹತ್ವ, ಒಕ್ಕೂಟದ ಅರ್ಥ, ಅಧ್ಯಕ್ಷರ ಹೊಣೆಗಾರಿಕೆ, ಪದಾಧಿಕಾರಿಗಳ ಜವಾಬ್ದಾರಿ, ಒಕ್ಕೂಟ ಸಭೆಯ ಸಮರ್ಪಕ ನಿರ್ವಹಣೆ, ಸಂಘ-ಯೋಜನೆ-ಬ್ಯಾಂಕಿಗೆ ಇರುವ ಸಂಬಂಧ, ಯೋಜನೆಯ ಕಾರ್ಯ ವೈಖರಿ, ಒಗ್ಗಟ್ಟಿನಿಂದ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.
ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ 2023-24 ನೇ ಸಾಲಿನ ಸಾಧನಾ ವರದಿಯನ್ನು ಮಂಡಿಸಿದರು. ಇದೇ ವೇಳೆ 2023-24 ನೇ ಆರ್ಥಿಕ ವರ್ಷದಲ್ಲಿ ವಿವಿಧ ವಿಷಯಗಳಲ್ಲಿ ಸಾಧನೆ ಮಾಡಿರುವ ತಾಲೂಕಿನ ಒಕ್ಕೂಟಗಳ ಅಧ್ಯಕ್ಷರುಗಳನ್ನು ಗುರುತಿಸಿ ಗೌರವಿಸಲಾಯಿತು. ದ.ಕ ಜಿಲ್ಲೆ 2 ರ ನಿರ್ದೇಶಕರಾದ ಪ್ರವೀಣ್ ಕುಮಾರ್, ತಾಲೂಕಿನ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು,ಮೇಲ್ವಿಚಾರಕರು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಆಶಾ ಪಾರ್ವತಿ ಸ್ವಾಗತಿಸಿ, ಮೇಲ್ವಿಚಾರಕಿ ಸವಿತಾ ವಂದಿಸಿದರು. ಮೇಲ್ವಿಚಾರಕಿ ಸುಗುಣಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.