ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ “ಗುರುತತ್ವವಾಹಿನಿ” ಉದ್ಘಾಟನೆ
ಬಂಟ್ವಾಳ : ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಬಗ್ಗೆ ಯುವವಾಹಿನಿ ಸದಸ್ಯರ ಮನೆ,ಮನೆ ಭಜನೆ ಕಾರ್ಯಕ್ರಮದ ಮೊದಲ ಹಂತವಾಗಿ “ಗುರುತತ್ವವಾಹಿನಿ ” ಯ ಉದ್ಘಾಟನಾ ಕಾರ್ಯಕ್ರಮ ಕುದ್ರೋಳಿ ಗುರುಪೀಠದ ಸಮ್ಮುಖದಲ್ಲಿ ನಡೆಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ ಪೂಜಾರಿ ಅವರು ನೆರವೇರಿಸಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ.

ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರ ಪ್ರಜಿತ್ ಅಮೀನ್,ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ಸಂಘಟನಾ ಕಾರ್ಯದರ್ಶಿ ಉದಯ್ ಮೆನಾಡ್,ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಕ್ರೀಡಾ ನಿರ್ದೇಶಕರಾದ ಮಧುಸೂದನ್ ಮಧ್ವ, ಸದಸ್ಯರಾದ ಹರೀಶ್ ಅಜೆಕಲಾ, ನಾಗೇಶ್ ಪೂಜಾರಿ ಏಲಬೆ, ಮಾಜಿ ಅಧ್ಯಕ್ಷರಾದ ರಾಜೇಶ್ ಸುವರ್ಣ, ಮಂಗಳೂರು ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ, ಮಂಗಳೂರು ಘಟಕದ ಸದಸ್ಯರಾದ ಕೌಶಿಕ್ ಮಂಜನಾಡಿ, ದಿಶಾಂತ್ ಮತ್ತಿತರರು ಉಪಸ್ಥಿತರಿದ್ದರು.