ನೂತನ ಎಸ್ಪಿ ಬಂಟ್ವಾಳ ಠಾಣೆಗೆ ಭೇಟಿ
ಬಂಟ್ವಾಳ : ದ.ಕ. ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮಂಗಳವಾರ ಬಂಟ್ವಾಳ ನಗರ ಪೊಲೀಸ್ ಠಾಣೆ, ಪೂಂಜಾಲಕಟ್ಟೆ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಉಪವಿಭಾಗಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಇಲ್ಲಿನ ಅಧಿಕಾರಿಗಳು-ಸಿಬ್ಬಂದಿಗಳಿಗೆ ಬ್ರೀಪಿಂಗ್ ನಡೆಸಿ, ಠಾಣಾ ದಾಖಲಾತಿ, ಕಡತಗಳ ಸೂಕ್ತ ನಿರ್ವಹಣೆ, ಠಾಣಾ ಪರಿಸರದ ಸ್ವಚ್ಚತೆ ಹಾಗೂ ಠಾಣಾ ಕರ್ತವ್ಯಗಳ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಡಿವೈಎಸ್ಪಿ ವಿಜಯಪ್ರಸಾದ್,ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.