Published On: Wed, Jul 10th, 2024

ಯಂತ್ರ ಶ್ರೀ ಮೂಲಕ ಭತ್ತದ ಕೃಷಿ ನಾಟಿ ತರಬೇತಿ ಕಾರ್ಯಕ್ರಮ

ಬಂಟ್ವಾಳ:   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.)ಬಂಟ್ವಾಳ ಇದರ ವಗ್ಗ ವಲಯದ ವಾಮದಪದವು, ಚೆನ್ನೈ ತೋಡಿ ಕಾರ್ಯಕ್ಷೇತ್ರದಲ್ಲಿ “ಯಂತ್ರ ಶ್ರೀ” ಕಾರ್ಯಕ್ರಮ ಜರಗಿತು.    

                                

  ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೃಷಿಕ ದೊಂಬಯ್ಯ ರವರಿಗೆ ಭತ್ತದ ತಟ್ಟೆನೇಜಿಯನ್ನು ಹಸ್ತಾಂತರಗೈದರು.


ಬಳಿಕ ಮಾತನಾಡಿದ ಅವರು ಕೃಷಿಕರು  ಯಂತ್ರಶ್ರೀ ಯೋಜನೆಯ ಮೂಲಕ ಕಡಿಮೆ ಖರ್ಚಿನಲ್ಲಿ ಭತ್ತದ ಕೃಷಿ ನಾಟಿ ಮಾಡಿ ಅಧಿಕ ಲಾಭ ಪಡೆಯಬಹುದು,ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಕಡಿಮೆ ದರದಲ್ಲಿ ಬಾಡಿಗೆಗೆ  ಕೃಷಿ ಯಂತ್ರೋಪಕರಣಗಳನ್ನು  ನೀಡಲಾಗುತ್ತಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.                      

ಯಂತ್ರ ಶ್ರೀ ಯೋಜನೆಯ ಮೇಲ್ವಿಚಾರಕರಾದ ಉಮೇಶ್ ರವರು ಯಂತ್ರ ಶ್ರೀ ಮೂಲಕ ಭತ್ತದ ಕೃಷಿ ನಾಟಿ ಮಾಡುವ ವಿಧಾನಗಳ ಬಗ್ಗೆ  ಮಾಹಿತಿ ನೀಡಿದರು.   ತಾಲೂಕು ಕೃಷಿ ಮೇಲ್ವಿಚಾರಕರಾದ ಜಯರಾಮ್ ಕಾರ್ಯಕ್ರಮ ನಿರೂಪಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter