Published On: Thu, Jul 11th, 2024

ವಿದ್ಯಾಗಿರಿ ಎಸ್. ವಿ. ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಿಡವನ್ನು ನಾಟಿ ಮಾಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ಎಸ್.ವಿ.ಎಸ್. ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಕಾಶೀನಾಥ್ ಶಾಸ್ತ್ರೀ ಹೆಚ್.ವಿ.ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭವಿಷ್ಯದ ಹಿತದೃಷ್ಟಿಯಿಂದ ಪರಿಸರ ಹಾಳಾಗದಂತೆ ರಕ್ಷಿಸುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಬೇಕು. ಪ್ರತಿಯೊಬ್ಬರು ತಮ್ಮ ಜೀವಿತಾವಧಿಯಲ್ಲಿ ಸಾಧ್ಯವಾದಷ್ಟು ವೃಕ್ಷಗಳನ್ನು ನೆಟ್ಟು ಪೋಷಿಸಿದರೆ ಪ್ರಕೃತಿಗೆ ನಾವು ಮಾಡುವ ಅಳಿಲ ಸೇವೆಯಾಗುತ್ತದೆ ಎಂದು ಹೇಳಿದರು

 ಮುಖ್ಯ ಶಿಕ್ಷಕ ಹರಿಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಬಂಗೇರ, ಪೂರ್ವಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿಯಾದ  ಹೇಮಲತಾ ಉಪಸ್ಥಿತರಿದ್ದರು. 

ವಿದ್ಯಾರ್ಥಿಗಳಾದ ಕು. ಪ್ರಣಮ್ಯ ವಿ ಸ್ವಾಗತಿಸಿದರು, ಸ್ನೇಹಲ್ ಗಾಣಿಗ ವಂದಿಸಿದರು,  ಕು. ಧೃತಿ ಎಸ್ ಕಾರ್ಯಕ್ರಮ ನಿರೂಪಿಸಿದರು.

 ನಂತರ ವಿಧ್ಯಾರ್ಥಿಗಳಿಂದ ಪರಿಸರ ಜಾಗೃತಿ ಸಂಬಂಧಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter