Published On: Sun, Jul 28th, 2024

ನೂಯಿ ಕುಸಿದ ಮನೆಗೆ ಡಾ. ಭರತ್ ಶೆಟ್ಟಿ ಭೇಟಿಸರ್ಕಾರದಿಂದ ಪರಿಹಾರ ಭರವಸೆ

ಕೈಕಂಬ : ಅಡ್ಡೂರು ಗ್ರಾಮದ ನೂಯಿಯ ಇಂದಿರಾನಗರದಲ್ಲಿ ಜು. 25ರಂದು ಸಂಜೆ ಕುಸಿದು ಬಿದ್ದು ಹಾನಿಗೀಡಾದ ಮನೆಗೆ ಶನಿವಾರ ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡಿರುವ ಆರ್ಥಿಕವಾಗಿ ಹಿಂದುಳಿದ ಧನಲಕ್ಷ್ಮಿ ಅವರಿಗೆ ಸರ್ಕಾರದಿಂದ ಲಭ್ಯವಿರುವ ಮಳೆಹಾನಿ ನಿಧಿಯಿಂದ ಪರಿಹಾರ ಮಂಜೂರಾತಿಗೆ ಬೇಕಾದ ಕ್ರಮ ಕೈಗೊಳ್ಳಲಾಗುದು.


ಜೊತೆಗೆ ದಾನಿಗಳ ನೆರವು ಪಡೆದು ಹಾಗೂ ವೈಯಕ್ತಿಕ ನೆಲೆಯಲ್ಲಿ ಅವರ ಪುತ್ರನ ಕಾಲೇಜು ವಿದ್ಯಾಭ್ಯಾಸ ಮುಂದುವರಿಸಲು ಸಹಕರಿಸುವೆ ಎಂದು ಮನೆ ಮಂದಿಗೆ ಭರವಸೆ ನೀಡಿದರು.

ಶಾಸಕರೊoದಿಗೆ ಗುರುಪುರ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಸುವರ್ಣ, ಹರೀಶ್ ಬಳ್ಳಿ, ಚಂದ್ರಾವತಿ, ಬಿಜೆಪಿ ಪ್ರಮುಖ ಚಿದಾನಂದ ನಂದ್ಯ ಮತ್ತಿತರರು ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter