Published On: Wed, Jul 31st, 2024

ಹಿರಿಯರ ಆಚಾರ ವಿಚಾರಗಳು, ಆಹಾರ ಪದ್ಧತಿ ಉತ್ತಮ ಆರೋಗ್ಯಕ್ಕೆ ನಾಂದಿ: ಸುಲೋಚನ ಭಟ್

ಬಂಟ್ವಾಳ: ಹಿರಿಯರ ಆಚಾರ ವಿಚಾರಗಳು, ಆಹಾರ ಪದ್ಧತಿಗಳು, ಉತ್ತಮ ಆರೋಗ್ಯಕ್ಕೆ ನಾಂದಿಯಾಗಿತ್ತು. ಆ ರೀತಿಯ ಆಹಾರ ಪದ್ಧತಿಗಳನ್ನು ಇಂದಿನ ಜನಾಂಗಕ್ಕೆ ತಿಳಿಸುವ ಅಗತ್ಯವಿದ್ದು. ಈ ನಿಟ್ಟಿನಲ್ಲಿ ಆಟಿಕೂಟ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಆಹಾರ ಪದ್ಧತಿಗಳು ಕೇವಲ ಆಟಿ ತಿಂಗಳಿಗೆ  ಸೀಮಿತವಾಗಿರದೆ ದೈನಂದಿನ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದು  ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಸುಲೋಚನಾ ಭಟ್ ಅಭಿಪ್ರಾಯ ಪಟ್ಟರು.


  ಬುಧವಾರ ಝನ್ಸಿರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಲ( ರಿ) ಕಲ್ಲಡ್ಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್( ರಿ.)ವಿಟ್ಲ ಇದರ ಕಲ್ಲಡ್ಕ ವಲಯದ ಬಾಳ್ತಿಲ, ಕಲ್ಲಡ್ಕ, ಗೋಳ್ತಮಜಲು ‘ಎ’ಹಾಗೂ ಗೋಳ್ತಮಜಲು’ ಸಿ’ ಒಕ್ಕೂಟಗಳ ಸಹಯೋಗದಲ್ಲಿ ಕಲ್ಲಡ್ಕ ನೇತಾಜಿ  ಯುವಕ ಮಂಡಲದ ನೇತಾಜಿ ಸ್ಮೃತಿ ಭವನದಲ್ಲಿ ನಡೆದ ‘ಆಟಿಡೊಂಜಿ ಲೇಸು” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝನ್ಸಿರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಲ( ರಿ) ಕಲ್ಲಡ್ಕ ದ ಅಧ್ಯಕ್ಷರಾದ ಮೀನಾಕ್ಷಿ ಆರ್ ಪೂಜಾರಿ ವಹಿಸಿದ್ದರು.


ಆಕೃತಿ ಕೇಂದ್ರದ  ನಾಗೇಶ್ ಕಲ್ಲಡ್ಕ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರಮೇಶ್ , ಗೋಳ್ತಮಜಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮ, ಬಾಳ್ತಿಲ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷೆ ಹಿರಣ್ಮಯೀ, ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಝನ್ಸಿ ರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಲದ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರು ತಮ್ಮ, ತಮ್ಮ ಮನೆಯಲ್ಲಿ  ಆಟಿ ತಿಂಗಳಲ್ಲಿ ಮಾಡುವ ತಿಂಡಿ ತಿನಸುಗಳನ್ನು ತಯಾರಿಸಿ ತಂದಿದ್ದು ಅದನ್ನು ಪ್ರದರ್ಶಿಸಿ ಅದರ ಉಪಯೋಗದ ಮಾಹಿತಿ ನೀಡಿ ನಂತರ ಸಾಮೂಹಿಕ ಭೋಜನ ಮಾಡಲಾಯಿತು.
ಯಮುನಾ ಟೀಚರ್ ಸ್ವಾಗತಿಸಿದರು, ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ವಿದ್ಯಾ ವಂದಿಸಿದರು, ಮಹಿಳಾ ಮಂಡಲದ ಸದಸ್ಯ ರೇಣುಕಾ ಕಾರ್ಯಕ್ರಮ ನಿರೂಪಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter