ಉಡುಪಿ: ಬಸ್ ಬ್ರೇಕ್ ಫೇಲ್ ಆಗಿ ಸ್ಕೂಟರ್ಗೆ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ಉಡುಪಿಯಲ್ಲಿ ಖಾಸಗಿ ಬಸ್ ಒಂದರ ಬ್ರೇಕ್ ಫೇಲ್ ಆಗಿ, ನಾಗರಿಕರೊಬ್ಬರಿಗೆ ಡಿಕ್ಕಿ ಹೊಡೆದಿದೆ. ಆ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಉಡುಪಿಯ ಕಲ್ಮಾಡಿಯಲ್ಲಿ ನಡೆದಿದೆ. ಉಡುಪಿಯಿಂದ ಮಲ್ಪೆಗೆ ತೆರಳುತ್ತಿದ್ದ ಬಸ್ ತಾಂತ್ರಿಕ ದೋಷದಿಂದ ಎದುರಿನಿಂದ ಬಂದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಜ್ಜುಗುಜ್ಜಾಗಿದೆ. ಸವಾರ, ನಿವೃತ್ತ ಮುಖ್ಯೋಪಾಧ್ಯಾಯ ಭಾಸ್ಕರ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.