Published On: Wed, Aug 14th, 2024

ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಡ ಶಾಲೆಯ “ಆಟಿದೊಂಜಿ ದಿನ” ಕಾರ್ಯಕ್ರಮ

ಬಂಟ್ವಾಳ:  ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಡ ಶಾಲೆಯ ನೇತ್ರಾವತಿ ತುಳು ಸಂಘದ ನೇತೃತ್ವದಲ್ಲಿ “ಆಟಿದೊಂಜಿ ದಿನ” ಕಾರ್ಯಕ್ರಮ ನಡೆಯಿತು. 

 ಬಾಳ್ತಿಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ,ಹಾಲಿ ಸದಸ್ಯ ವಿಠಲ ನಾಯ್ಕಾವರು ಸಂಪನ್ಮೂಲ ವ್ಯಕ್ತಿಯಾಗಿಭಾಗವಹಿಸಿ, ಆಟಿ ತಿಂಗಳ ವಿಶೇಷ ಆಚರಣೆ ಮತ್ತು ಮಹತ್ವವನ್ನು ವಿವರಿಸಿದರು.

 ಶಾಲಾ ಮುಖ್ಯೋಪಾಧ್ಯಾಯರಾದ  ಶಿವಪ್ಪ ನಾಯಕ ಸ್ವಾಗತಿಸಿದರು. ಶಿಕ್ಷಕಿ ಸುಧಾ ನಾಗೇಶ್ ಪ್ರಸ್ತಾವನೆಗೈದರು. ವಿಶ್ರಾಂತ ಮುಖ್ಯೋಪಾಧ್ಯಾಯರಾದ  ಭೋಜ , ಶಾಲಾ ನಾಯಕ ಮನ್ವಿತ್ ಸಿ. ಪೂಜಾರಿ ಉಪಸ್ಥಿತರಿದ್ದರು. ಅಧ್ಯಾಪಕರಾದ ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು. ಅಜಿತ್ ಕುಮಾರ್  ವಂದಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter