ಕಲ್ಲಡ್ಕ ರೈ. ಸೇ.ಸ.ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ
ಬಂಟ್ವಾಳ:ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘವು ೨೦೨೩-೨೦೨೪ ನೇ ಸಾಲಿನಲ್ಲಿ ಸಾಧಿಸಿದ ಪ್ರಗತಿ ಮತ್ತು ಸಾಧನೆಯನ್ನು ಪರಿಗಣಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬೇಂಕು ಲಿ.ಸಂಸ್ಥೆ ೨೦೨೩-೨೦೨೪ ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ಪಡೆದಿರುತ್ತದೆ. ಸಂಘದ ಅಧ್ಯಕ್ಷರಾದ ಕೆ.ಪದ್ಮನಾಭ ಕೊಟ್ಟಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಗೋಪಾಲ್ ಅವರು ದ.ಕ.ಜಿಲ್ಲಾಕೇಂದ್ರ ಸಹಕಾರ ಬೇಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರಕುಮಾರ್ ಅವರಿಂದ ಸ್ವೀಕರಿಸಿದರು.

ಈ ಸಂದರ್ಭ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಜಾರಾಮ ಭಟ್ ಟಿ.ಜಿ ಹಾಗೂ ಇತರ ನಿರ್ದೇಶಕರು ಉಪಸ್ಥಿತರಿದ್ದರು.
ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘವು ೨೦೨೩-೨೪ ನೇ ಸಾಲಿನಲ್ಲಿ ರೂ.೪೫೪ ಕೋಟಿ ವ್ಯವಹಾರ ನಡೆಸಿ, ರೂ ೧,೫೩,೫೬,೦೧೫.೮೮ ಲಾಭಗಳಿಸಿದೆ. ಆಡಿಟ್ ವರ್ಗೀಕರಣದಲ್ಲಿ ‘ಎ’ ತರಗತಿ ಹೊಂದಿರುತ್ತದೆ. ಸಂಘವು ರೂ.೬೧ ಕೋಟಿ ಠೇವಣಿ ಸಂಗ್ರಹಿಸಿ, ತನ್ನ ಸದಸ್ಯರಿಗೆ ೬೯,೧೬,೫೪,೫೨೨ ರೂ. ಸಾಲವನ್ನು ವಿತರಿಸಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ .
ಸಂಘದಉತ್ತಮ ಪ್ರಗತಿ ಹಾಗೂ ಸಾಧನೆಗಾಗಿ ದ.ಕ.ಜಿಲ್ಲಾಕೇಂದ್ರ ಸಹಕಾರಿ ಬೇಂಕು ಕಳೆದ ೯ ವರ್ಷಗಳಿಂದ ಉತ್ತಮ ಪ್ರಗತಿ ಹಾಗೂ ಅಭಿವೃದ್ಧಿ ಹೊಂದುತ್ತಿರುವ ಸಹಕಾರ ಸಂಘವೆಂದು ಗುರುತಿಸಿ ಸನ್ಮಾನ, ಪ್ರಶಸ್ತಿ ಪತ್ರ ಹಾಗೂ ಫಲಕ ನೀಡಿ ಗೌರವಿಸಿದೆ.