ಪೊಳಲಿ ಶ್ರೀ ವರಮಹಾಲಕ್ಷ್ಮೀ ವೃತದ ಪ್ರಯುಕ್ತ ಮಹಿಳೆಯರಿಗೆ ಅರಿಸಿನ-ಕುಂಕುಮ ಮತ್ತು ಬಳೆ
ಪೊಳಲಿ: ಕರ್ನಾಟಕ ಸರ್ಕಾರ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಒಂದಾದ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪ್ರಾರ್ಥಿಸಿ ಪೂಜೆ ನಡೆದ ಬಳಿಕ ಶ್ರೀ ವರಮಹಾಲಕ್ಷ್ಮೀ ವೃತದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಅರಿಶಿನ-ಕುಂಕುಮ ಮತ್ತು ಹಸಿರು ಬಳೆಗಳನ್ನು ನೀಡಲಾಯಿತು.

ನೂರಾರು ಭಕ್ತರು ಅರಿಸಿನ-ಕುಂಕುಮ ಮತ್ತು ಬಳೆಗಳನ್ನು ದೇವರ ಪ್ರಸಾದ ಎಂಬಂತೆ ಪಡಕೊಂಡರು. ದೇವಳದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವಭಟ್, ಕೆ.ರಾಮ್ ಭಟ್ ಪೊಳಲಿ ನೀಡಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಇದ್ದರು
