ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ ನೀಡಲಾಗಿದೆ. ಇದೀಗ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಗವರ್ನರ್ ಯಾವ ರೀತಿಯಲ್ಲಿ ಅನುಮತಿ ಕೊಟ್ಟಿದ್ದಾರೆಂದು ಗೊತ್ತಿಲ್ಲ. ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಈಗಾಗಲೇ ಸಿಎಂ ಲೀಗಲ್ ಟೀಮ್ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.
ಕೇಂದ್ರದಿಂದ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಒತ್ತಡ ಇತ್ತು.ಆ ಕಾರಣದಿಂದ ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಮೌಖಿಕವಾಗಿ, ಪತ್ರ ವ್ಯವಹಾರ ಮಾಡಿಲ್ಲ, ಈ ಬಗ್ಗೆ ನಾವು ಉತ್ತರ ರಾಜ್ಯಪಾಲರಿಗೆ ಕೊಟ್ಟಿದ್ದೇವೆ. ಶೋಕಾಸ್ ನೋಟಿಸ್ ಕೂಡ ಉತ್ತರ ನೀಡಲಾಗಿದೆ. ಇಷ್ಟೆಲ್ಲ ಮಾಡಿದರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ ಎಂದ ಪರಮೇಶ್ವರ್ ಹೇಳಿದ್ದಾರೆ. ನೇರವಾಗಿ ಸಿಎಂ ಸಿದ್ದರಾಮಯ್ಯ ಯಾವುದ್ರಲ್ಲೂ ಭಾಗಿಯಾಗಿಲ್ಲ.
ಇದನ್ನೂ ಓದಿ: ಕಸ್ಟಮ್ ಹೆಸರಿನಲ್ಲಿ ವೈದ್ಯನಿಗೆ 1.33 ಕೋಟಿ ವಂಚನೆ
ದ್ವೇಷದ ರಾಜಕಾರಣ ಅನಿಸುತ್ತೆ ಎಂದು ಹೇಳಿದ್ದಾರೆ. ಇನ್ನು ಸಿಎಸ್ ಶಾಲಿನ್ ರಜನೀಶ್, ಎಸಿಎಸ್ ಅತೀಕ್ಗೆ ನೋಟಿಸ್ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆ ಮಾಡಲಾಗಿದೆ. ಇದರ ಜತೆಗೆ ಮುಡಾ ಪ್ರಕರಣದ ಮೂವರು ದೂರುದಾರಾರದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ , ಪ್ರದೀಪ್ಗೂ ನೋಟಿಸ್ ನೀಡಲಾಗಿದೆ.