Published On: Tue, Aug 20th, 2024

ಜ್ಞಾನ ವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕಿನ ಪೊಳಲಿ ವಲಯದ ಬೆಂಜನಪದವು,    ಬ್ರಹ್ಮರಕೊಟ್ಲು,ಮೇರಮಜಲು, ಕೊಡ್ಮಣ್ ಕಾರ್ಯಕ್ಷೇತ್ರದ  ಶ್ರೀ ದುರ್ಗಾ, ಸೌಭಾಗ್ಯ, ವ್ಯಾಘ್ರೇಶ್ವರಿ, ಅಮ್ಮ ಜ್ಞಾನವಿಕಾಸ ಕೇಂದ್ರ ವಾರ್ಷಿಕೋತ್ಸವ ಕಾರ್ಯಕ್ರಮವು ಬೆಂಜನಪದವು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.


ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ  ರೋನಾಲ್ಡ್ ಡಿ’ಸೋಜ  ಅಮ್ಟಾಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಹಿಳೆಯರಿಗೆ ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಲು ಜ್ಞಾನ ವಿಕಾಸ ಕೇಂದ್ರ  ಉತ್ತಮ ವೇದಿಕೆಯಾಗಿದೆ. ಮಹಿಳೆಯರ ಸಮಸ್ಯೆಯನ್ನು ಅರಿತು ಕೊಂಡು ಮಾತೃಶ್ರೀ  ಹೇಮಾವತಿ ಹೆಗ್ಡೆ ಯವರು  ಮಹಿಳೆಯರನ್ನು ಮುಖ್ಯ ವಾಹಿನಿಗೆ ತರಲು ಜ್ಞಾನವಿಕಾಸ ಕೇಂದ್ರ ಪ್ರಾರಂಭಿಸಿದ್ದು, ಇದರ  ಸದುಉಪಯೋಗ ಪಡೆದು ಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಾರ್ಧನ ಬಾರಿಂಜೆ ವಹಿಸಿದ್ದರು
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬಂಟ್ವಾಳ ಎಸ್ ವಿ ಎಸ್ ಶಾಲಾ ಶಿಕ್ಷಕಿ ಪೂರ್ಣಿಮಾ  ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆ ಆಗಿರುವುದರಿಂದ ಮಹಿಳೆ ವಿದ್ಯಾವಂತಳಾದರೆ ಒಂದು ಕುಟುಂಬದ ಚಿತ್ರಣವೇ ಬದಲಾಗುತ್ತದೆ. ಮಕ್ಕಳು ಹೆಚ್ಚಾಗಿ ಅಮ್ಮಂದಿರರ ಒಡನಾಟಿನಲ್ಲಿ ಇರುವುದರಿಂದ ಮಕ್ಕಳಿಗಾಗಿ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಗಳನ್ನಾಗಿ ಮಾಡಿ ಎಂದರು 
ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ರವರು ಮಾತನಾಡಿ ಕಷ್ಟದ ಜೀವನ, ಆಚಾರ ವಿಚಾರದ ಬಗ್ಗೆ ಮಕ್ಕಳಿಗೂ ತಿಳಿ ಹೇಳಬೇಕು ಎಂದರು
ವಲಯದ ಅಧ್ಯಕ್ಷರಾದ ಜನಾರ್ಧನ ಪುಂಚಮೆ, ಉದ್ಯಮಿ ಉಮೇಶ್ ಸಾಲ್ಯಾನ್,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ವಾಮನಾ ಆಚಾರ್ಯ,  ಬ್ರಹ್ಮರ ಕೊಟ್ಲು ಒಕ್ಕೂಟ ದ ಕಾರ್ಯದರ್ಶಿ ಡೇವಿಡ್ , ಸೇವಾಪ್ರತಿನಿಧಿ ಭವ್ಯ, ಶೋಭ, ಶೈಲಜಾ, ಒಕ್ಕೂಟ ಅಧ್ಯಕ್ಷರು,ಪದಾಧಿಕಾರಿಗಳು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
ಪೊಳಲಿ ವಲಯದ ಮೇಲ್ವಿಚಾರಕಿ  ಹರಿಣಾಕ್ಷಿ ಸ್ವಾಗತಿಸಿ,ಸೇವಾಪ್ರತಿನಿಧಿ ರತ್ನವಂದಿಸಿದರು, ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter