Published On: Tue, Aug 20th, 2024

ಪ್ರಾಥಮಿಕ ಶಾಲಾ ಮಕ್ಕಳ ಕಲ್ಲಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಬಂಟ್ವಾಳ : ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ, ಕ್ರೀಡೆಯಿಂದ ದೈಹಿಕ ಆರೋಗ್ಯ ವೃದ್ಧಿ ಆಗುತ್ತೆ ಎಂದು ನಿವೃತ್ತ ದೈಹಿಕ ಶಿಕ್ಷಕ ಶಂಕರ್ ಹೇಳಿದರು.ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಸರಕಾರಿ ಪ್ರಾಥಮಿಕ ಶಾಲೆ ನೆಟ್ಲ ಇವುಗಳ ಸಂಯುಕ್ತಾಶ್ರಯದಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಕಲ್ಲಡ್ಕವಲಯ  ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಕುಲಾಲ್ ವಹಿಸಿದ್ದರು.
ಗೋಳ್ತಮಜಲು  ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ್,ಸದಸ್ಯ ದೀಪಕ್ ಕುಮಾರ್,  ಶಂಬೂರ್ ಶಾಲಾ ಮುಖ್ಯ ಶಿಕ್ಷಕ ಜಯರಾಮ್, ಕಡೆಶಿವಾಲಯ ಶಾಲಾ ದೈಹಿಕ ಶಿಕ್ಷಕ ಭಾಸ್ಕರ್, ನೆಟ್ಲಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಲ್ ಕುಮಾರ್, ವಿನಯ,ಮಾಜಿ ಗ್ರಾಮ ಪಂಚಾಯತ್ ಸದಸ್ಯ  ಲೋಕನಾಥ್ ಕುಲಾಲ್, ನೇರಳಕಟ್ಟೆ ಶಾಲಾ ದೈಹಿಕ ಶಿಕ್ಷಕಿ ಶೋಭಾ ಮೊದಲಾದವರು ಉಪಸ್ಥಿತರಿದ್ದರು.


ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶೋಭಲತಾ ಬಿ ಸ್ವಾಗತಿಸಿ,  ಶಿಕ್ಷಕಿ ಇಂದಿರಾ ವಂದಿಸಿದರು, ಸಹ ಶಿಕ್ಷಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ಬಳಿಕ ಕ್ರೀಡಾಕೂಟದ ನೆನಪಿಗಾಗಿ ಹಣ್ಣಿನ ಗಿಡ ನಾಟಿಮಾಡಲಾಯಿತು.


ಬಹುಮಾನ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ವನ್ನು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರಾಥಮಿಕ ಶಾಲೆ ಅನಂತಾಡಿ, ಬಾಲಕಿಯರ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಾಣಿ ಹಾಗೂ ದ್ವಿತೀಯ  ಸ್ಥಾನವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಂಬೂರು ಪಡೆದುಕೊಂಡಿತು.


ವಿಜೇತ ಶಾಲಾ ತಂಡಗಳಿಗೆ ಟ್ರೋಪಿ ನೀಡಿ ಗೌರವಿಸಲಾಯಿತು. ಉಳಿದಂತೆ ಭಾಗವಹಿಸಿದ ಎಲ್ಲಾ ತಂಡಗಳಿಗೆ ಶಾಲಾ ಪರವಾಗಿ  ಸ್ಮರಣಿಕೆ ನೀಡಲಾಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter