ಅಕ್ರಮ ಆಸ್ತಿ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಇಂದು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿಚಾರಣೆ ಕೂಡ ಹೈಕೋರ್ಟ್ನಲ್ಲಿ ನಡೆಸಲಾಗಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.ರಾಜ್ಯ ಸರ್ಕಾರ, ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ಸೂಕ್ತ. ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿ . ಕೆ.ಸೋಮಶೇಖರ್, ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರ ಪೀಠ ತೀರ್ಪು ನೀಡಿದೆ.
ಇನ್ನು ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದು ಸೂಕ್ತ . ಹೀಗಾಗಿ ಅಂತಿಮವಾಗಿ ಸುಪ್ರೀಂಕೋರ್ಟ್ ಈ ಬಗ್ಗೆ ತೀರ್ಮಾನಿಸಬೇಕಿದೆ ಎಂದು ಹೇಳಿದೆ. ಯತ್ನಾಳ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್, ಅರ್ಜಿದಾರರು ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂಕೋರ್ಟ್ಗೆ ಹೋಗಲಿದೆ. ಸಿಬಿಐ ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ತನಕ ಡಿಕೆ ಶಿವಕುಮಾರ್ ರಿಲೀಫ್ ಎಂದು ಹೇಳಲಾಗಿದೆ.
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಎರಡೂ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಇದೀಗ ಇಂದು ವಿಚಾರಣೆ ನಡೆಸಿ, ಇದನ್ನು ಸುಪ್ರೀಂ ಕೋರ್ಟ್ಗೆ ವಹಿಸುವುದು ಸೂಕ್ತ ಎಂದು ಹೇಳಿದೆ.