ಬಂಟ್ವಾಳ: ಬೊಲ್ಪು ಎಫ್.ಪಿ.ಒ ವಾರ್ಷಿಕ ಮಹಾಸಭೆ

ಬಂಟ್ವಾಳ: ಬಿ. ಸಿ. ರೋಡಿನ ರಂಗೋಲಿ ಸಭಾಂಗಣದಲ್ಲಿ ಆ. 28 ಬುಧವಾರದಂದು ಬೊಲ್ಪು ರೈತ ಉತ್ಪಾದಕರ ಸಂಸ್ಥೆ (ಎಫ್.ಪಿ.ಒ) ಜೋಡುಮಾರ್ಗ ಇದರ ವಾರ್ಷಿಕ ಮಹಾಸಭೆ ನಡೆದಿದ್ದು, ಕೃಷಿ ಪಂಡಿತ ಪ್ರಶಸ್ತಿ ಪುರಸ್ಕೃತ ಸುರೇಶ್ ಬಲ್ನಾಡು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾಳುಮೆಣಸು ಬೆಳೆ ಮತ್ತು ನೀರು ಗೊಬ್ಬರ ನಿರ್ವಹಣೆ ಕುರಿತು ಸಂವಹನ ನಡೆಸಿದರು.
ಬಂಟ್ವಾಳ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್. ಮಾತನಾಡಿ ಆಹಾರ ಬೆಳೆಯಾದ ಭತ್ತದ ಕೃಷಿಗೆ ಇಲಾಖೆ ಆದ್ಯತೆ ನೀಡುತ್ತಿದೆ ಹಾಗೂ ಹಡಿಲು ಗದ್ದೆ ಭತ್ತದ ಬೆಳೆ ಬೆಳೆಯಲು ಪ್ರೋತ್ಸಾಹ ನೀಡುತ್ತಿದೆ. ಜೊತೆಗೆ ಎಫ್.ಪಿ.ಒ ರೈತರು ಬಯಸಿದರೆ ಬೆಳೆ ಕಟಾವು ಯಂತ್ರವನ್ನು ಆದ್ಯತೆಯಲ್ಲಿ ನೀಡುವುದಾಗಿ ತಿಳಿಸಿದರು. ಮತ್ತು ಬೊಲ್ಪು ಸಂಸ್ಥೆ ಕೃಷಿ ಇಲಾಖೆಯಿಂದ ನಿರ್ದಿಷ್ಟ ಪ್ರದೇಶದ ರೈತರ ಪ್ರಯೋಜನಕ್ಕಾಗಿ ನೋಂದಾಯಿತವಾಗಿದೆ. ಅದಕ್ಕೆ ಇಲಾಖೆಯಿಂದ ವಿವಿಧ ಸವಲತ್ತು ಒದಗಿಸಿದೆ ಎಂದರು.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜೊ. ಪ್ರದೀಪ್ ಡಿಸೋಜ ಇಲಾಖೆಯಲ್ಲಿ ರೈತರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಕಾಳುಮೆಣಸು ಜೈವಿಕ ಗೊಬ್ಬರಗಳನ್ನು ಕೃಷಿಕರಿಗೆ ಉಚಿತ ವಿತರಿಸಿದರು.
ಬೊಲ್ಪು ಎಫ್.ಪಿ.ಒ ಅಧ್ಯಕ್ಷ ರಾಜ್ ಬಂಟ್ವಾಳ್ ಸಭಾಧ್ಯಕ್ಷತೆ ವಹಿಸಿ, ಸಂಸ್ಥೆಯ ಆರಂಭ, ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಸದಾನಂದ ಡಿ. ಶೆಟ್ಟಿ, ನಿರ್ದೇಶಕರಾದ ದೇವಪ್ಪ ಕುಲಾಲ್ ಪಂಜಿಕಲ್ಲು, ಜಗದೀಶ ಭಂಡಾರಿ ಕುರಿಯಾಳ, ಸೀತಾರಾಮ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿರ್ದೇಶಕರಾದ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿ, ಅರ್ವಿನ್ ಡಿಸೋಜ ಲೊರೆಟ್ಟೊ ಮಹಾಸಭೆಯ ನೋಟಿಸು ವಾಚಿಸಿದರು. ಹರ್ಷಿತ್ ಲೆಕ್ಕಪತ್ರ ಮಂಡಿಸಿದರು. ವಿಜಯ ರೈ ವಾಮದಪದವು ವಂದಿಸಿದರು. ಕೃಷ್ಣಪ್ಪ ಸಪಲ್ಯ ಅಂತರ ಕಾರ್ಯಕ್ರಮ ನಿರೂಪಿಸಿದರು.