೧೭ ಶಾಲೆಗಳ ೪೭೦ ಮಕ್ಕಳು ಭಾಗಿ
ಗುರುಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ
ಕೈಕಂಬ : ಗುರುಪುರ(ನಡುಗುಡ್ಡೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ. ೨೯ರಂದು ಆಯೋಜಿಸಲಾದ ಬದ್ರಿಯಾ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಶವಂತ ಆಳ್ವ ದೀಪ ಬೆಳಗಿಸಿ ಉದ್ಘಾಟಿಸಿದರು.

ಗುರುಪುರ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಬಾಬು ಪಿ. ಎಂ. ಸ್ವಾಗತಿಸಿದರು. ಎಸ್ಡಿಎಂಸಿ ಅಧ್ಯಕ್ಷ ಜಿ. ಕೆ. ಚಂದ್ರಶೇಖರ ಭಟ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶೀಲಾವತಿ ಕೆ, ಬಿಆರ್ಪಿ ತಹಸೀನ್, ಗುರುಪುರ ಪಂಚಾಯತ್ ಸದಸ್ಯರಾದ ಜಿ. ಎಂ. ಉದಯ ಭಟ್, ಸಚಿನ್ ಅಡಪ ಮತ್ತು ರಾಜೇಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕಿ ಗ್ರೆಟ್ಟಾ ಮಾರಿಯಾ ಲೋಬೊ ಕಾರ್ಯಕ್ರಮ ನಿರೂಪಿಸಿದರು. ಗುರುಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವಯೋಲಾ, ಸಿಬಿಸಿ ಸದಸ್ಯೆ ಜಲಜಾ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜಯಶ್ರೀ ಎಂ., ವಂದಿಸಿದರು.
ಪ್ರತಿಭಾ ಕಾರಂಜಿಯಲ್ಲಿ ಕ್ಲಸ್ಟರ್ನ ಒಟ್ಟು ೧೭ ಪ್ರಾಥಮಿಕ ಶಾಲೆಗಳ ೪೭೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆ ತೋರ್ಪಡಿಸಿದರು. ವಿಜೇತ ಮಕ್ಕಳಿಗೆ ಪದಕ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು.