ಬೊಂಡಾಲ ಶಾಲೆಗೆ ಎಂ.ಆರ್ .ಪಿ .ಎಲ್ ಸಂಸ್ಥೆಯ ಅನುದಾನದಿಂದ ನೂತನ ಶಾಲಾ ಕೊಠಡಿಗೆ ಶಿಲಾನ್ಯಾಸ
ಬಂಟ್ವಾಳ : ತಾಲೂಕಿನ ಬೊಂಡಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಆರ್ .ಪಿ .ಎಲ್ ಸಂಸ್ಥೆಯ ಅನುದಾನದಿಂದ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜನಾರ್ಧನ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪಳನೀರು ಅನಂತ ತಂತ್ರಿಗಳ ಪೌರೋಹಿತ್ಯದಲ್ಲಿ ಭೂಮಿ ಪೂಜೆ ನೆರವೇರಿತು.ಇದೇ ವೇಳೆ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ರೇಖಾ ಸಿ .ಹೆಚ್ ಅವರನ್ನು ಶಾಲಾ ಶಿಕ್ಷಕರಿಂದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸದಸ್ಯರ ವತಿಯಿಂದ ಸನ್ಮಾನಿಸಲಾಯಿತು.
ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,, ಬಂಟ್ವಾಳ ಪುರಸಭಾ ಸದಸ್ಯ ಎ.ಗೋವಿಂದ ಪ್ರಭು,ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಜಯರಾಮ್ ಹೊಳ್ಳ, ಶ್ರೀಧರ್ ಶೆಟ್ಟಿ ಬೊಂಡಾಲ,ಕೊರಗಪ್ಪ ಬಂಗೇರ, ವಿವೇಕಾನಂದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿನೋದ್ ಶೆಟ್ಟಿ,ಶಿವರಂಜಿನಿ ಕಲಾಕೇಂದ್ರ ಸಂಚಾಲಕಿ ಶಾರದಾ ಎಸ್ ರಾವ್, ಸಂಸ್ಕೃತ ಗುರುಗಳಾದ ದೇವರಾಜ್ ಮಂಗಳೂರು, ಶಿವಾನಂದ, ಬೊಂಡಾಲ ಜನ ಸೇವಾ ಸಮಿತಿ ಸಂಚಾಲಕರಾದ ಗಿರಿಧರ್ ಬಿ. ಪಿ.ಉಪಸ್ಥಿತರಿದ್ದರು.
ಶಿಶುಮಂದಿರದ ಮಕ್ಕಳು ಪ್ರಾರ್ಥಿಸಿದರು.ಶಾಲಾ ಶಿಕ್ಷಕಿ ಲಾವಣ್ಯ ಸ್ವಾಗತಿಸಿದರು, ಪ್ರಭಾರ ಮುಖ್ಯ ಶಿಕ್ಷಕಿ ರೇಖಾ ಸಿ.ಹೆಚ್ ವಂದಿಸಿದರು, ಶಿಕ್ಷಕಿ ಸೌಮ್ಯಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕಿಯರಾದ ಭವ್ಯ ಹಾಗೂ ಕಿಶೋರಿ ಇವರು ಸಹಕರಿಸಿದರು