ಸೇವೆಯಿಂದ ಸಹಕಾರಿ ಸಂಘಗಳು ಜನರಿಗೆ ಹತ್ತಿರ: ಡಾ.ಎಂ.ಎನ್.ರಾಜೇಂದ್ರ ಕುಮಾರ್
ಬಂಟ್ವಾಳ: ಬ್ಯಾಂಕಿಂಗ್ ಕ್ಷೇತ್ರದ ತವರೂರಾದ ಅವಿಭಜಿತ ಜಿಲ್ಲೆಯಲ್ಲಿ ಹಲವು ರಾಷ್ಟ್ರೀಕೃತ ಬ್ಯಾಂಕ್ ಗಳು ಪರಸ್ಪರ ವಿಲೀನಗೊಂಡು ಜನರಿಂದ ದೂರವಾಗುತ್ತಿದ್ದರೆ,ಗ್ರಾಹಕರಿಗೆ ನೀಡುವ ಸೇವೆಯಿಂದ ಸಹಕಾರಿ ಸಂಘಗಳು ಜನರಿಗೆ ಹತ್ತಿರವಾಗುತ್ತಿದೆ ಎಂದು ಕರ್ನಾಟಕ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ,ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಹೇಳಿದ್ದಾರೆ.

ಬಿ.ಸಿ. ರೋಡಿನ ಸ್ಪರ್ಶಾಕಲಾಮಂದಿರದಲ್ಲಿ ಶನಿವಾರ ನಡೆದ ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಬಂಟ್ವಾಳ ಇದರ “ವಿಂಶತಿ ಸಂಭ್ರಮ – ಸದಸ್ಯರ ಸಮಾಗಮ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಸಹಕಾರಿ ಮನೋಭಾವ ಹೃದಯದಲ್ಲಿ ಬರಬೇಕು, ಜನರಿಗೆ ಆರ್ಥಿಕ ಸಮೃದ್ಧಿ ಕೊಡಲು ಸಹಕಾರಿ ಸಂಘಗಳಿಂದ ಸಾಧ್ಯವಾಗಿದೆ ಎಂದರು.
ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಅಧ್ಯಕತೆ ವಹಿಸಿದ್ದರು. ಮಾಜಿ ಸಚಿವ ಬಿ.ರಮನಾಥ ರೈ ಅಶಕ್ತರಿಗೆ ಸಹಾಯಧನ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಶಕ್ತರಿಗೆ ಧನ ಸಹಾಯ ನೀಡಲಾಯಿತು. ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಾಜಿ ಸಚಿವ ಬಿ. ರಮಾನಾಥ ರೈ, ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಸಹಕಾರಿ ಸುದರ್ಶನ್ ಜೈನ್ ಸೇರಿದಂತೆ, ಸಂಘದ ಆರಂಭಿಕ ಪ್ರವರ್ತಕರು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರನ್ನು ಗೌರವಿಸಲಾಯಿತು. ೧೩ ಶಾಖೆಗಳ ಅದೃಷ್ಟವಂತ ಗ್ರಾಹಕರಿಗೆ ಬಹುಮಾನ ನೀಡಲಾಯಿತು, ಸವ್ಯಸಾಚಿ ಶಾಖೆಯನ್ನು ಅಭಿನಂದಿಸಲಾಯಿತು.
ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಮಂಗಳೂರಿನ ಧವಳ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಸುದರ್ಶನ್ ಜೈನ್ ,ಅಧ್ಯಾಪಕರ ಸಹಕಾರಿ ಸಂಘ ವಿಟ್ಲ ಇದರ ಅಧ್ಯಕ್ಷ ರಮೇಶ್ ನಾಯಕ್ ರಾಯಿ, ಪಾಣೆಮಂಗಳೂರಿನ ಸುಮಂಗಲ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ನಾಗೇಶ್ ಕಲ್ಲಡ್ಕ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರಿ ಸಂಘದ ಅಧ್ಯಕ್ಷ ಕೆ. ಜಯಂತ್ ನಾಯಕ್, ಬೆಳ್ತಂಗಡಿಯ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಅಧ್ಯಕ್ಷ ಪದ್ಮನಾಭ ದೇವಾಡಿಗ, ಸಂಘದ ಉಪಾಧ್ಯಕ್ಷ ಮಂಜುನಾಥ ರೈ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಜಿತ್ ಕುಮಾರ್ ಜೈನ್,ಮೆನೇಜರ್ ಸದಾಶಿವ ಪುತ್ರನ್ ಉಪಸ್ಥಿತರಿದ್ದರು.
ನಿರ್ದೇಶಕರಾದ ದಿವಾಕರ ದಾಸ್ ಸ್ವಾಗತಿಸಿದರು, ಲೋಕೆಶ್ ಸುವರ್ಣ ವಂದಿಸಿದರು. ರಂಗ ಕಲಾವಿದ ಎಚ್.ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು.
ಮಧ್ಯಾಹ್ನದ ಬಳಿಕ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಅವರ ಅಧ್ಯಕ್ಷತೆಯಲ್ಲಿ
ವಾರ್ಷಿ ಕ ಮಹಾಸಭೆ ನಡೆಯಿತು.
ಸಂಜೆ ಸಾಂಸ್ಕೃತಿಕ ಕಾರ್ಯಕ್ತಮದ ಪ್ರಯುಕ್ತ ಸಂಘದ ಸದಸ್ಯರು,ಸಿಬ್ಬಂದಿಗಳು ಹಾಗೂ ನಿರ್ದೇಶಕರಿಂದ ಸಂಗೀತ ರಸಮಂಜರಿ,ಯಕ್ಷಗಾನ ಪ್ರದರ್ಶನಗೊಂಡಿತು.