Published On: Fri, Sep 27th, 2024

ಸಾಲ ವಾಪಸ್​​​ ಕೇಳಲು ಹೋದ ಬ್ಯಾಂಕ್ ಸಿಬ್ಬಂದಿಗೆ ಗನ್​​​ತೋರಿಸಿ ಬೆದರಿಕೆ ಹಾಕಿದ ಅಪ್ಪ-ಮಗ

ಪುತ್ತೂರು: ಎಸ್.ಬಿ.ಐ ಬ್ಯಾಂಕ್ ಸಿಬ್ಬಂದಿ ಸಾಲ ವಾಪಸ್ಸು ಕೇಳಲು ಹೋದಾಗ ಗನ್​​​ ತೋರಿಸಿ ಬೆದರಿಕೆ ಹಾಕಿರುವ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಕೃಷ್ಣ ಕಿಶೋರ್ ಹಾಗೂ ಅಖಿಲೇಶ್‌ ಬಳಿ ಸಾಲ ವಾಪಸು ಕೇಳಿದಕ್ಕೆ ಬ್ಯಾಂಕ್​​ ಸಿಬ್ಬಂದಿಗೆ ಪಿಸ್ತೂಲ್​​ ತೋರಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಪೊಲೀಸ್​​ ದೂರು ನೀಡಲಾಗಿದೆ.

ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಎಂಬುವವರು ಎಸ್.ಬಿ.ಐ ಬ್ಯಾಂಕ್​ನಿಂದ 2 ಕೋಟಿ ರೂ. ಸಾಲ ಪಡೆದಿದ್ದಾರೆ. ಸಾಲ ಮರುಪಾವತಿಸದೆ ಸತ್ತಾಯಿಸುತ್ತಿದ್ದ ಕೀರ್ತಿ ಅಖಿಲೇಶ್​​ಗೆ ಬ್ಯಾಂಕ್ ಮ್ಯಾನೇಜರ್ ಚಿನ್ಮಯ ಹಲವು ಬಾರಿ ವಕೀಲರ ಮೂಲಕ ನೋಟಿಸ್ ನೀಡಿದ್ದಾರೆ. ಇದಕ್ಕೂ ಅವರು ಉತ್ತರ ನೀಡಿದ ಕಾರಣ ಬ್ಯಾಂಕ್ ಮ್ಯಾನೇಜರ್‌ ತನ್ನ ತಂಡದೊಂದಿಗೆ ಕೀರ್ತಿ ಅಖಿಲೇಶ್ ಮನೆಗೆ ಧಾವಿಸಿದ್ದಾರೆ.

ಬ್ಯಾಂಕ್​​ನವರು ಮನೆ ಬಂದ ಕಾರಣ ಆಕ್ರೋಶಗೊಂಡ ಕೀರ್ತಿ ಪತಿ ಅಖಿಲೇಶ್ ಹಾಗೂ ಆತನ ತಂದೆ ಕೃಷ್ಣ ಕಿಶೋರ್ ಗಲಾಟೆ ಮಾಡಿದ್ದಾರೆ. ಈ ವೇಳೆ ಕೃಷ್ಣ ಕಿಶೋರ್ ಮನೆಯಲ್ಲಿದ್ದ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter