ಬಂಟ್ವಾಳ: ಎರಡು ಬೈಕ್ಗಳ ನಡುವೆ ಢಿಕ್ಕಿ, ಒಬ್ಬ ಬೈಕ್ ಸವಾರ ಸಾವು

ಮಾರ್ನಬೈಲು: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿ ಸಮೀಪದ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ.2ರಂದು ಎರಡು ಬೈಕ್ ಸವಾರರ ನಡುವೆ ರಸ್ತೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಒಬ್ಬ ಬೈಕ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಬರಿಮಾರು ನಿವಾಸಿ ಸರ್ಪಾಝ್ (33) ಎಂದು ಗುರುತಿಸಲಾಗಿದೆ.
ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ವೇಳೆ ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ಬರುತ್ತಿದ್ದಾಗ ಎದುರಿನಿಂದ ಬೈಕ್ನಲ್ಲಿ ಬಂದ ಇಂಮ್ತಿಯಾಜ್ ಎಂಬಾತ ಢಿಕ್ಕಿ ಹೊಡೆದಿದ್ದಾನೆ.
ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಬೈಕ್ನವರು ರಸ್ತೆಗೆ ಬಂದು ಬಿದ್ದಿದ್ದಾರೆ. ತಕ್ಷಣ ಇಬ್ಬರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸರ್ಪಾಝ್ ಸಾವನ್ನಪ್ಪಿದ್ದಾರೆ.