Published On: Tue, Oct 8th, 2024

ಬಂಟ್ವಾಳ: ರಕ್ಷಿತಾರಣ್ಯದಿಂದ ರಿಕ್ಷಾದಲ್ಲಿ ಹಾಲುಮಡ್ಡಿ ಸಾಗಾಟ ಮಾಡುತ್ತಿದ್ದ ನಾಲ್ವರ ಬಂಧನ

ವಿಟ್ಲ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಕೆದಿಲ ನಿವಾಸಿಗಳಾದ ಅಲಿ ಹೈದರ್, ಉಮ್ಮರ್ ಫಾರೂಕ್, ಮಹಮ್ಮದ್ ಹಸೈನಾರ್, ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ.

ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಈ ಕೃತ್ಯ ಮಾಡುತ್ತಿದ್ದರು ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಇದರ ಆಧಾರ ಮೇಲೆ ಪೊಲೀಸರು ಇವರ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ 11 ಕೆ.ಜಿ. ಹಾಲುಮಡ್ಡಿ, ಮೇಣ ತೆಗೆಯಲು ಬಳಸಿದ ಸಲಕರಣೆ, ರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ.

ವಲಯ ಅರಣ್ಯಾಧಿಕಾರಿ ಕಿರಣ್ ನೇತೃತ್ವದಲ್ಲಿ ಈ ಕಾರ್ಯಚರಣೆ ನಡೆಸಲಾಗಿತ್ತು. ಉಪ ವಲಯಾರಣ್ಯಾಧಿಕಾರಿ ವೀರಣ್ಣ, ಪ್ರಕಾಶ್ ಬಿ.ಟಿ., ಗಿರೀಶ್ ಎಚ್.ಪಿ., ಗಸ್ತು ಅರಣ್ಯಪಾಲಕ ಸತೀಶ್ ಡಿ’ಸೋಜಾ, ಚಾಲಕರಾದ ರಾಜೇಶ್, ತೇಜಪ್ರಕಾಶ್ ಹಾಗೂ ಸಿಬ್ಬಂದಿಗಳು ಕೂಡ ಕಾರ್ಯಚರಣೆಗೆ ಸಹಕಾರ ನೀಡಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter