ಧರ್ಮ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಸುನಿಲ್ ಕೆ.ಆರ್.
ಬಂಟ್ವಾಳ:ಧರ್ಮವನ್ನು ನಾವು ರಕ್ಷಿಸಿದಾಗ ಧರ್ಮವು ನಮ್ಮನ್ನು ಸಂರಕ್ಷಿಸುತ್ತದೆ. ಇದಕ್ಕಾಗಿ ಪ್ರತಿಯೊಂದು ಹಂತದಲ್ಲಿಯೂ ಧಾರ್ಮಿಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕಾರ್ಕಳ ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಚಾರ ಪ್ರಮುಖ್ ಸುನಿಲ್ ಕೆ.ಆರ್. ಹೇಳಿದ್ದಾರೆ.

ತಾಲೂಕಿನ ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 22 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಅಧ್ಯಕ್ಷ ಎಂ.ದುರ್ಗಾದಾಸ್ ಶೆಟ್ಟಿ ಮಾವಂತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಜಿತೇಂದ್ರ ಕೊಟ್ಟಾರಿ, ಸಂದೇಶ ಶೆಟ್ಟಿ ಮಂಗಳೂರು, ಶ್ರೀಧರ ಶೆಟ್ಟಿ ಮಂಗಲ್ಪಾಡಿ, ಕಿರಣ್ ಕುಮಾರ್ ಮಂಜಿಲ, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ರಾಜೇಶ ಶೆಟ್ಟಿ ಸೀತಾಳ, ಪ್ರಭಾಕರ ಪ್ರಭು, ಹರೀಶ ಸಪಲ್ಯ ಪಡಿಲ್ ಬೆಟ್ಟು, ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎ.ಸುರೇಶ್ ರೈ, ಗುರುಪುರ ಬಂಟರ ಸಂಘದ ಸಂಚಾಲಕ ಚಂದ್ರಹಾಸ ಶೆಟ್ಟಿ ನಾರ್ಲ ಶುಭ ಹಾರೈಸಿದರು.
ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಬಿಜೆಪಿ ಕ್ಷೇತ್ರಾಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು,ಸಿದ್ದಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು, ಜಿಲ್ಲಾ ಕಂಬಳ ಸಮಿತಿ ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ ಪೊಡುಂಬ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಮಿತಿ ಅಧ್ಯಕ್ಷ ರಾಜೇಶ ಜೈನ್ ಪಡ್ರಾಯಿಗುತ್ತು, ಮಹಿಳಾ ಸಮಿತಿ ಅಧ್ಯಕ್ಷೆ ಗುಣವತಿ ರಾಜೇಶ್ ಮತ್ತಿತರರು ಇದ್ದರು.
ಇದೇ ವೇಳೆ ಮಹಾಚಂಡಿಕಾಯಾಗ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.
ಟ್ರಸ್ಟಿ ವಸಂತ ಕುಮಾರ್ ಅಣ್ಣಳಿಕೆ ಸ್ವಾಗತಿಸಿ, ಡೊಂಬಯ ಅರಳ ಪ್ರಸ್ತಾವನೆಗೈದರು. ದಿನೇಶ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.