Published On: Thu, Oct 24th, 2024

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ: ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್​​​ ಕುಮಾರಸ್ವಾಮಿ ಘೋಷಣೆ

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಭಾರೀ ಕುತೂಹಲ ಸೃಷ್ಟಿಸಿದೆ. ಈ ಬಾರಿ ಜಿದ್ದಾಜಿದ್ದಿ ಖಂಡಿತ ಎಂಬಂತೆ ಕಾಣುತ್ತಿದೆ. ಕಾಂಗ್ರೆಸ್​​​ನಿಂದ ಬಿಜೆಪಿಯಲ್ಲಿದ್ದ ಸಿಪಿ ಯೋಗೇಶ್ವರ್​ ಒಂದು ಕಡೆಯಾದರೆ. ಇದೀಗ ಬಿಜೆಪಿ ಮತ್ತು ಜೆಡಿಎಸ್​​​​​ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿಖಿಲ್​​​ ಕುಮಾರ್​​​ ಸ್ವಾಮಿಯವನ್ನು ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿಯಾಗಿ ಮೈತ್ರಿ ಪಕ್ಷಗಳು ಘೋಷಣೆ ಮಾಡಿದೆ. ನಾಳೆ ನಿಖಿಲ್​​​ ಕುಮಾರ್​​ ಸ್ವಾಮಿಯವರ ನಾಮಪತ್ರ ಸಲ್ಲಿಕೆ ನಡೆಯಲಿದೆ. ಇನ್ನು ಒಂದು ದಿನ ಮಾತ್ರ ಬಾಕಿ ಇರುವ ಕಾರಣ ನಾಳೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿಂದು ನಡೆದ ಜೆಡಿಎಸ್​​-ಬಿಜೆಪಿ ನಾಯಕರ ಸಮನ್ವಯ ಸಭೆ ಬಳಿಕ ನಿಖಿಲ್​ ಹೆಸರು ಘೋಷಣೆ ಮಾಡಲಾಗಿದೆ. ಈ ಹಿಂದೆ ಬಿಎಸ್​ ಯಡಿಯೂರಪ್ಪ ಅವರೇ ಜೆಡಿಎಸ್​​​ ಪಕ್ಷ ವ್ಯಕ್ತಿಯೇ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ನಿಖಿಲ್ ಸ್ಪರ್ಧೆಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ ಯಡಿಯೂರಪ್ಪ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಮನ್ವಯ ಸಭೆ ನಡೆಸಿ ನಂತರ ನಿಖಿಲ್​ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಲಾಯಿತು. ಇದೀಗ ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter