ಪುತ್ತೂರು: ಬೈಕ್ ಗಳ ನಡುವೆ ಅಪಘಾತ; ಓರ್ವ ಬೈಕ್ ಸವಾರನಿಗೆ ಗಂಭೀರ ಗಾಯ

ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗೊಂಡ ಘಟನೆಯೂ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಹಾಗೂ ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳು ಢಿಕ್ಕಿಯಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.