ಪೊಳಲಿ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ
ಪೊಳಲಿ:ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ ಪೊಳಲಿ ಇದರ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.5 ರಂದು ಮಂಗಳವಾರ ಶ್ರೀ ಅಖಿಲೇಶ್ವರ ದೇವಸ್ಥಾನದ ಆವರಣದಲ್ಲಿ ದೇವಳದ ಅರ್ಚಕರಾದ ಶ್ರೀವಾಸುದೇವ ಮಯ್ಯ ಇವರ ಸಮ್ಮುಖದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಸದಾಶಿವ ಮೊಯ್ಲಿ, ಸಂಚಾಲಕರಾದ ಮುರಳಿ ಪೊಳಲಿ ಹಾಗು ಮಂಡಳಿಯ ಸದಸ್ಯರು, ಸಪ್ತಾಹ ಸಮಿತಿ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ, ಕಾರ್ಯಧ್ಯಕ್ಷರಾದ ಚಂದ್ರಹಾಸ ಪಲ್ಲಿಪಾಡಿ , ಉಮೇಶ್ ಸಾಲ್ಯಾನ್ ಬೆಂಜನಪದವು, ಪ್ರ.ಕಾರ್ಯದರ್ಶಿ ದಾಮೋದರ ನೆತ್ತರಕೆರೆ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.