Published On: Tue, Nov 12th, 2024

ಕೊಯಿಲ: ಸರ್ಕಾರಿ ಪ್ರೌಢಶಾಲೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ:ಶಿಕ್ಷಣದ ಜೊತೆಗೆ ಕ್ರೀಡೆಗೆ ಆದ್ಯತೆ ನೀಡಿದಾಗ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಹೇಳಿದ್ದಾರೆ.
ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎಂ.ದುಗಾದಾಸ್ ಶೆಟ್ಟಿ ಮಾವಂತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಮೂಲಕ ಖಾಸಗಿ ಶಾಲೆಯನ್ನು ಮೀರಿಸುವ ನಿಟ್ಟಿನಲ್ಲಿ ಬೆಳೆದಿದೆ’ ಎಂದರು.


ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ, ಕ್ಲಬ್ಬಿನ ಉಪಾಧ್ಯಕ್ಷ ವಿಜಯ ಫೆರನಾಂಡಿಸ್ ಶುಭ ಹಾರೈಸಿದರು.
ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ರಾಜೇಶ ಜೈನ್ ಪಡ್ರಾಯಿ, ಮೋಹನ್ ಕೆ.ಶ್ರೀಯಾನ್ ರಾಯಿ, ಚಂದ್ರಶೇಖರ ಗೌಡ ಕಾರಂಬಡೆ, ಭೋಜ ಶೆಟ್ಟಿ ಹೋರಂಗಳ, ಲ್ಯಾನ್ಸಿ ಕುವೆಲ್ಲೊ ಕುದ್ಕೋಳಿ, ಸುರೇಶ ಪೂಜಾರಿ ರಾಯಿ, ಹಿರಿಯ ಶಿಕ್ಷಕಿ ಸೌಮ್ಯಾ ಮತ್ತಿತರರು ಇದ್ದರು.


ಮುಖ್ಯಶಿಕ್ಷಕಿ ಸೌಜನ್ಯಾ ರಾವ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿಕ್ಷಣ ನಿರ್ದೇಶಕ ಜನಾರ್ದನ ವಂದಿಸಿದರು. ಶಿಕ್ಷಕ ರಮೇಶ ಮಯ್ಯ ಕಾರ್ಯಕ್ರಮ ನಿರೂಪಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter