ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಸೋಮವಾರ ಬಂಟ್ವಾಳ ತಾಲೂಕಿನ ಉಳಿ ಸರಕಾರಿ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಉಳಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಚೆನ್ನಪ್ಪ ಸಾಲ್ಯಾನ್ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ದೊರೆಯುವಂತ ವಿವಿಧ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು, ಅದರಲ್ಲೂ ಮಹಿಳೆಯರಿಗೆ ಧೈರ್ಯ ತುಂಬುವ ಕಾರ್ಯ ಜ್ಞಾನವಿಕಾಸ ಕೇಂದ್ರದ ಮೂಲಕ ನಡೆಯುತ್ತಿದೆ ಎಂದರು.

ಕಾರ್ಯಕ್ರಮ ಅಧ್ಯಕ್ಷತೆ ಯನ್ನು ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷರು ಚಿದಾನಂದ ರೈ ಕಕ್ಯೆ ವಹಿಸಿದ್ದರು.ಮುಖ್ಯ ಅತಿಥಿಯಾಗಿದ್ದ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ರವರು ಮಾತನಾಡಿಮಹಿಳೆಯಾರು ನಾಲ್ಕು ಗೋಡೆಗಳ ಮದ್ಯೆ ಬಂದಿಯಾಗದೆ ಹೊರಗಿನ ಪ್ರಪಂಚದ ಜ್ಞಾನವನ್ನು ಅರಿತುಕೊಳ್ಳಬೇಕು, ಜ್ಞಾನವಿಕಾಸ ಕೇಂದ್ರದ ಮೂಲಕ ಮಹಿಳೆಯರು ಸ್ವ ಉದ್ಯೋಗ ಮಾಡಿಕೊಂಡು ಯಶಸ್ವಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಉಳಿ ಸರಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಹಮಿದ್ ರವರನ್ನು ಅಭಿನಂದಿಸಿ ಗೌರವಿಸಲಾಯಿತು.
ಹಿರಿಯ ಸದಸ್ಯೆ ಅಪ್ಪಿ ಯವರು ಕೇಂದ್ರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.
ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ , ಜ್ಞಾನವಿಕಾಸ ಕೇಂದ್ರದ ಹಿರಿಯ ಸದಸ್ಯೆ ಸುಂದರಿ, ಉಳಿ ಶಾಲೆಯ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ,ಸೇವಾಪ್ರತಿನಿಧಿ ಉಷಾ, ವಿ ಎಲ್ ಇ ಸುಶ್ಮಿತಾ ಉಪಸ್ಥಿತರಿದ್ದರು.
ವಲಯದ ಮೇಲ್ವಿಚಾರಕಿ ಸವಿತಾ ಸ್ವಾಗತಿಸಿದರು,
ಜ್ಞಾನ ವಿಕಾಸ ಕೇಂದ್ರದ ಸಯೋಜಕಿ ಪ್ರೇಮ ವರದಿ ವಾಚಿಸಿದರು,ಸೇವಾಪ್ರತಿನಿಧಿ ಶೇಖರ್ ವಂದಿಸಿದರು .ಸೇವಾಪ್ರತಿನಿಧಿ ಅಮೃತ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು.
ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.