ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ  ಸದಸ್ಯರು  ಬಂಟ್ವಾಳ ತಾಲೂಕಿನ  ವಗ್ಗದ ದೊಂಪದ ಪಲಿಕೆಯಿಂದ ಕಾಡಬೆಟ್ಟು ಅಂತರಂಗಡಿ ತನಕ ಸುಮಾರು ಒಂದೂವರೆ ಕಿಲೋ ಮೀಟರ್ ರಸ್ತೆ ಬದಿಯಲ್ಲಿ ಬೆಳೆದಂತ ಪೊದೆ, ಹುಲ್ಲು, ಗಿಡ ಗಂಟೆಗಳನ್ನು ತೆರವುಗೊಳಿಸಿ ಸ್ವಚ್ಛತಾ ಶ್ರಮದಾನಗೈದರು.


ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು  ಯೋಜನಾಧಿಕಾರಿ ಜಯಾನಂದ ಪಿ,ಸ್ಥಳೀಯ ಗ್ರಾ. ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್ ರೈ ಶ್ರಮದಾನದ ವೇಳೆ ಭಾಗವಹಿಸಿ ಸದಸ್ಯರನ್ನು ಪ್ರೋತ್ಸಾಹಿಸಿದರು.


  ಶೌರ್ಯ ಘಟಕ ಕಾಡಬೆಟ್ಟು ವಗ್ಗದ ಸಂಯೋಜಕಿ ರೇಖಾ.ಪಿ,ಘಟಕ ಪ್ರತಿನಿಧಿ ಪ್ರವೀಣ್, ಸದಸ್ಯರುಗಳಾದ ಸಂಪತ್ ಶೆಟ್ಟಿ,ಮಹಾಬಲ ರೈ,ನಾರಾಯಣ್ ಪೂಜಾರಿ,ನಾರಾಯಣ್ ಶೆಟ್ಟಿ, ಲಕ್ಷ್ಮಣ್,ಆನಂದ,ಮೋಹನಂದ ,ರೋಹಿತ್, ಪವನ್,ಜನಾರ್ಧನ, ಅಶೋಕ,ರಮೇಶ, ಪ್ರಮೀಳಾ, ಪ್ರಿಯಾಂಕ,ಶಶಿಕಲಾ, ಪವಿತ್ರ ಮಧ್ವ, ಭಾಗವಹಿಸಿದ್ದರು.
ಶ್ರಮಧಾನ ಕಾರ್ಯಕ್ರಮದ ಬಳಿಕ  ತಂಡದ ಮಾಸಿಕ ಸಭೆಯನ್ನು ನಡೆಸಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. 

By suddi9

Leave a Reply

Your email address will not be published. Required fields are marked *