ನ.23 ರಂದು ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳ
ಬಂಟ್ವಾಳ: ತಾಲೂಕಿನ ಎಲಿಯ ನಡುಗೋಡು ಗ್ರಾಮ ಸಿದ್ಧಕಟ್ಟೆ- ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಮಿತಿ ವತಿಯಿಂದ 2 ನೇ ವರ್ಷದ ಕೊಡಂಗೆ ವೀರ -ವಿಕ್ರಮ ಜೋಡುಕರೆ ಕಂಬಳ ಕೂಟವು ನ.23 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಪೊಡುಂಬ ಸಂದೀಪ್ ಶೆಟ್ಟಿ ಅವರು ತಿಳಿಸಿದ್ದಾರೆ.

ಬುಧವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರುಈಕಂಬಳಕೂಟವನ್ನು ಅಂದು ಬೆಳಿಗ್ಗೆ ಗಂಟೆ 7.30ಕ್ಕೆ ಶ್ರೀ ಕ್ಷೇತ್ರ ಪೂಂಜಾ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಕಾಶ್ ಆಚಾರ್ಯ ಅವರು ಉದ್ಘಾಟಿಸುವರು.
ಪೂಂಜಾ ಕ್ಷೇತ್ರದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯರ ಅಧ್ಯಕ್ಷತೆ ವಹಿಸುವರು, ಕುಡುಂಬೂರುಗುತ್ತು ಕ್ಷೇತ್ರದ ಮೊಕ್ತೇಸರ ಗುತ್ತಿನಾರ್ ಜಯರಾಮ ಶೆಟ್ಟಿ,
ಶಿವಮೊಗ್ಗ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಎಲಿಯಾಸ್ ಸ್ಯಾಂಕ್ಟಿಸ್,ಸಿದ್ಧಕಟ್ಟೆ ಹಾ. ಉ.ಸ. ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ,
ಸಿದ್ಧಕಟ್ಟೆ ಸಿ.ಎ.ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು, ಹಿರಿಯ ವೈದ್ಯರಾದ ಡಾ.ಪ್ರಭಾಚಂದ್ರ ಜೈನ್, ಡಾ.ಸುದೀಪ್ ಕುಮಾರ್ ಜೈನ್,
ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ಮತ್ತಿತರ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸಂಜೆ 7 ಗಂಟೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು,ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್,ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ.ರಾಘವೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ,ಆರ್ ಎಸ್ ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ,
ಮೂಡುಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ,ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ,
ಎಸ್ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಿತ
ಅವಿಭಜಿತ ಜಿಲ್ಲೆಯ ಎಲ್ಲಾ ಶಾಸಕರು ಮತ್ತಿತರ ಗಣ್ಯರು ಭಾಗವಹಿಸಲಿದ್ದಾರಲ್ಲದೆ ವಿಶೇಷ ಆಕರ್ಷಣೆಯಾಗಿ ಚಿತ್ರ ನಟರಾದ ಜಗ್ಗೇಶ್,ವಿಜಯರಾಘವೇಂದ್ರ,ರಾಜ್ ಬಿ.ಶೆಟ್ಟಿ,ಬೋಜರಾಜ ವಾಮಂಜೂರು,ನಿರೀಕ್ಷಾ ಶೆಟ್ಟಿ,ಸಂಗೀತ ನಿರ್ದೇಶಕ ಗುರುಕಿರಣ್ ಅವರು ಭಾಗವಹಿಸಲಿದ್ದಾರೆ ಎಂದರು.
ಮೂರನೇ ಕಂಬಳ:
ಕೊಡಂಗೆ ಸುಸಜ್ಜಿತ ಹೊಸ ಜೋಡುಕರೆಯಲ್ಲಿ ಒಂದು ವರ್ಷದೊಳಗೆ ಇದೇ ಮೊದಲ ಬಾರಿಗೆ 3 ನೇ ಕಂಬಳ ನಡೆಯುತ್ತಿದೆ. ಕಳೆದ ಮಾ.16 ರಂದು ಪ್ರಥಮ ಕಂಬಳ ಮತ್ತು ಅ.19ರಂದು ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ವತಿಯಿಂದ ಸಬ್ ಜ್ಯೂನಿಯರ್ ವಿಭಾಗದಲ್ಲಿ ಕಂಬಳ, ಇದೀಗ 2ನೇ ವರ್ಷದ ಕಂಬಳ ನಡೆಯುತ್ತಿದ್ದು,
ಈ ಬಾರಿ 200 ಕ್ಕೂ ಮಿಕ್ಕಿ ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಈ ಜೋಡುಕರೆಯಲ್ಲಿ ವರ್ಷವಿಡೀ ಕುದಿ ಕಂಬಳ ನಡೆಯುತ್ತಿದ್ದು, ಈ ಬಾರಿ ವಾಹನ ನಿಲುಗಡೆಗೆ ಮತ್ತು ಕೋಣಗಳ ವಿಶ್ರಾಂತಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.ಮಳೆಗಾಲದಲ್ಲಿ ಗುಡ್ಡದ ನೀರು ಕಂಬಳ ಕರೆಗೆ ಹರಿದು ಬಾರದಂತೆ ತಡೆಯಲು ಸುತ್ತಲೂ ಸುಮಾರು 30 ಸಿಮೆಂಟ್ ಪೈಪ್ ಮತ್ತು
ಬೇಸಿಗೆಯಲ್ಲು ಕಂಬಳ ಕರೆಗೆ ನಿರಂತರ ನೀರಿನ ಸಂಪರ್ಕ ಅಳವಡಿಸಲಾಗಿದೆ.
ಕಂಬಳ ಕರೆ ಸುತ್ತಲೂ ಇರುವ ಪ್ರಕೃತಿದತ್ತ ಮರ ಗಿಡಗಳ ನೆರಳು ಓಟದ ಕೋಣಗಳಿಗೆ ಅನುಕೂಲಕರವಾಗಲಿದೆ ಎಂದು ಪೊಡುಂಬ ಸಂದೀಪ್ ಶೆಟ್ಟಿ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿಯ ಪ್ರ. ಕಾರ್ಯದರ್ಶಿ ಶಶಿಧರ ಶೆಟ್ಟಿ ಕಲ್ಲಾಪು, ಕೋಶಾಧಿಕಾರಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಗೌರವ ಸಲಹೆಗಾರರಾದ ವಸಂತ ಶೆಟ್ಟಿ ಕೇದಗೆ, ಸುರೇಶ ಶೆಟ್ಟಿ ಸಿದ್ಧಕಟ್ಟೆ, ಕಿರಣ್ ಕುಮಾರ್ ಮಂಜಿಲ, ಸಂಘಟನಾ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ ಕುರುಡಾಡಿ ಮೊದಲಾದವರಿದ್ದರು.