Published On: Sun, Nov 24th, 2024

 ಗೊಳ್ತಮಜಲು ಸರಕಾರಿ ಪ್ರೌಢ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ  ಕಾರ್ಯಕ್ರಮ

ಬಂಟ್ಚಾಳ: ಶಾಲಾ ಶೈಕ್ಷಣಿಕ ಹಂತಗಳಲ್ಲಿ ಮತ್ತು ಭೌತಿಕ ವಿಚಾರಗಳಿಗೆ ಪೋಷಕರು ಶಿಕ್ಷಕರ ಜೊತೆ ಜೊತೆಯಾಗಿ ಸೇರಿ ಕೆಲಸಗಳಲ್ಲಿ ತೊಡಗಿದಾಗ ಅಭಿವೃದ್ಧಿಯು ಸುಲಭವಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ನಿವೃತ ಬಿ ಆರ್ ಪಿ ನಾರಾಯಣ ಗೌಡ ಅಭಿಪ್ರಾಯ ಪಟ್ಟರು.


ಶನಿವಾರ ಬಂಟ್ವಾಳ ತಾಲೂಕಿನ ಗೊಳ್ತಮಜಲು ಸರಕಾರಿ ಪ್ರೌಢ ಶಾಲೆಯ 2024-25 ನೇ ಸಾಲಿನ ಪ್ರತಿಭಾ ಪುರಸ್ಕಾರ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಚಂದ್ರಶೇಖರ್ ವಹಿಸಿದ್ದರು.
ಈ ಸಂದರ್ಭದಲ್ಲಿ ಗೋಳ್ತಮಜಲು ಸರಕಾರಿ ಪ್ರೌಢಶಾಲೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ  ಪದೊನ್ನತಿ ಹೊಂದಿ ವ್ಯವಸ್ಥಾಪಕರಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ವರ್ಗಾವಣೆಗೊಂಡ ಪುಷ್ಪರಾಜ್ ಬಿ,   ಶಾಲೆಯ ಸೌಂದರ್ಯ ಹೆಚ್ಚಿಸಲು ಸಹಕರಿಸಿದ ಕಡೇಶಿವಾಲಯ ಶಾಲಾ ಕಲಾ ಶಿಕ್ಷಕ ಸತ್ಯಶಂಕರ್, ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಾಲಾ ದೈಹಿಕ ಶಿಕ್ಷಕ ಪ್ರಕಾಶ್ ಟಿ  ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾರ್ಥಿಗಳಿಗೆ ನಡೆಸಲಾದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಲಿಕಾ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೇ ಪ್ರಶಸ್ತಿ ಪತ್ರ, ಹಾಗೂ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಗೊಳ್ತಮಜಲು ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ್, ಎಸ್ ಡಿ ಎಂ ಸಿ  ಸದಸ್ಯರುಗಳಾದ ಬಾಲಕೃಷ್ಣ ಕೊಟ್ಟಾರಿ, ನಾಗೇಶ್ ಪೂಜಾರಿ, ಕೃಷ್ಣಪ್ಪ ಪೂಜಾರಿ, ಶಾಲಾ ನಾಯಕಿ ಉಪಸ್ಥಿತರಿದ್ದರು.
ಶಿಕ್ಷಕಿ ಸುನಿತಾ  ಸ್ವಾಗತಿಸಿದರು, ಶಾಲಾ ಮುಖ್ಯ ಶಿಕ್ಷಕ ರಮೇಶ್  ವರದಿ ವಾಚನಗೈದರು.ಶಿಕ್ಷಕ ಸತ್ಯಶಂಕರ್ ಬಹುಮಾನಿತರ ಪಟ್ಟಿ ವಾಚಿಸಿ, ಶಿಕ್ಷಕ ಶಂಕರ್ ಪಾವಸ್ಕರ್ ವಂದಿಸಿದರು. ಶಿಕ್ಷಕಿ ಸುಜಾತ ಎಂ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter