Published On: Sun, Nov 24th, 2024

ಫರಂಗಿಪೇಟೆಯಲ್ಲಿ‌ 129ನೇ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆಕೆಎಂಸಿ ಆಸ್ಪತ್ರೆ ಮಂಗಳೂರು ಹಾಗೂ
ರೋಟರಿ ಕ್ಲಬ್ ಫರಂಗಿಪೇಟೆ ಇದರ ಆಶ್ರಯದಲ್ಲಿ‌129ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಭಾನುವಾರ ನಡೆಯಿತು.


ಮಂಗಳೂರು ಜೆಪ್ಪುವಿನ  ಶ್ರೀ ಅಂಬಾಮಹೇಶ್ವರೀ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ಎ. ಅವರು ಶಿಬಿರ ಉದ್ಘಾಟಿಸಿ ಮಾತನಾಡಿ ಸೇವಾಂಜಲಿ‌ ಪ್ರತಿಷ್ಠಾನದ ಕೃಷ್ಣಕುಮಾರ್ ಪೂಂಜ ಅವರ‌ ಸೇವಾ ಕಾರ್ಯಗಳು ಎಲ್ಲರಿಗೂ ಪ್ರೇರಣೆಯಾಗಿದೆ. ಮಕ್ಕಳಿಗೆ ಸಂಗೀತ, ನೃತ್ಯ.‌ಭಜನೆಯಂತಹ ಕಾರ್ಯಕ್ರಮಗಳನ್ನು ನಡೆಸುವುದರ ಜೊತೆಗೆ ಜನರ ಪ್ರಾಣ ಉಳಿಸುವಂತಹ ರಕ್ತದಾನ ಶಿಬಿರವನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.


ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕ ಶಿವಕುಮಾರ್ ಬಿ. ,ನಿವೃತ್ತ ಅಧಿಕಾರಿ ಎಂ.ಆರ್. ನಾಯರ್ ಶುಭ ಹಾರೈಸಿದರು. ಕೆಎಂಸಿ ಆಸ್ಪತ್ರೆಯ ವೈದ್ಯ ಸ್ಟೀಫನ್, ಪ್ರವೀಣ್ ಕಬೇಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಮುಖರಾದ ಪ್ರವೀಣ್ ಬಿ., ಆರ್ ಎಸ್ ಜಯ ರಾಮಲ್ ಕಟ್ಟೆ, ಪ್ರಶಾಂತ್ ತುಂಬೆ, ಅರ್ಜುನ್ ಪೂಂಜ,ದಿನೇಶ್ ತುಂಬೆ, ದಿನೇಶ್ ಶೆಟ್ಟಿ ಕೊಟ್ಟಿಂಜ,‌ ಸುರೇಶ್ ರೈ  ಪೆಲಪಾಡಿ, ನಾರಾಯಣ ಬಡ್ಡೂರು, ಪದ್ಮನಾಭ ಶೆಟ್ಟಿ ಪುಂಚಮೆ, ಹೂವಿನ ವ್ಯಾಪಾರಿ ಮಹಮ್ಮದ್ ಹನೀಫ್,ಜಯರಾಂ ತುಂಬೆ ಮೊದಲಾದವರಿದ್ದರು.


ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಸ್ವಾಗತಿಸಿದರು.ಶಿಬಿರದಲ್ಲಿ ಒಟ್ಟು 66 ಯುನಿಟಿ ರಕ್ತ ಸಂಗ್ರಹವಾಯಿತು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter