Published On: Fri, Dec 6th, 2024

ಗದಗ: ಸರಿಯಾದ ಸಮಯಕ್ಕೆ ಬಸ್ಸು ಬರುತ್ತಿಲ್ಲ, ಬಸ್ ನಿಲ್ದಾಣದಲ್ಲಿ ದಿಢೀರ್ ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣಕ್ಕೆ ಸರಿಯಾದ ಸಮಯಕ್ಕೆ ಬಸ್ಸು ಬರುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ಮಾಡಿದ್ದಾರೆ. 4.30ಕ್ಕೆ ಬಿಡುವ ಬಸ್ಸು 6 ಗಂಟೆಯಾದ್ರೂ ಬಸ್​​​ ಬರುತ್ತಿಲ್ಲ. ಇದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣ ಎದುರು ಪಾಲಾಬದಾಮಿ ರಸ್ತೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ ಮಾಡಲಾಗಿದೆ.

ಸರಿಯಾದ ಸಮಯಕ್ಕೆ ಬಸ್​​​ ಬರದೇ ಪ್ರಾಥಮಿಕ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿರ ಪರದಾಡುವಂತಾಗಿದೆ. ಬೆಳಗ್ಗೆ 8 ಗಂಟೆಗೆ ವಿವಿಧ ಗ್ರಾಮಗಳಿಂದ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಇಲ್ಲಿಗೆ ಆಗಮಿಸುತ್ತಾರೆ. ಇನ್ನು ಬಸ್​​​ ಸಿಗುವುದಿಲ್ಲ ಎಂದು ಬುತ್ತಿ ಕಟ್ಟಿಕೊಂಡ ಬಂದು ಶಾಲೆಯಲ್ಲಿ ತಿಂಡಿ ತಿನ್ನುವ ಎಂದರೆ ಈ ಬಸ್​​​ಗಳೇ ಸರಿಯಾದ ಸಮಯಕ್ಕೆ ಬರುವುದಿಲ್ಲ ಎಂದು ವಿದ್ಯಾರ್ಥಿಗಳು ದೂರುತ್ತಿದ್ದಾರೆ.

ಕುಂದ್ರಳ್ಳಿ ಗ್ರಾಮ ಸೇರಿ ವಿವಿಧ ಗ್ರಾಮಗಳ ಮಕ್ಕಳ ಈ ಬಗ್ಗೆ ದೂರು ನೀಡಿದ್ದಾರೆ. ಸರಿಯಾಗಿ ಬಸ್ ಸಿಗದೆ ದಿನನಿತ್ಯ ಒಂದಲ್ಲಾ ಒಂದು ಸಮಸ್ಯೆ ಎದುರಿಸುತ್ತಿದ್ದಾರೆ. ಜತೆಗೆ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter