Published On: Thu, Dec 12th, 2024

ಬಂಟ್ವಾಳ: ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ

ಬಂಟ್ವಾಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಪಕೇಂದ್ರ ವೀರಕಂಭ ಇದರ ಸಹಯೋಗದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆಯು ವೀರಕಂಭ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಗುರುವಾರ ನಡೆಯಿತು.ಗ್ರಾಮ ಸಮುದಾಯ ಆರೋಗ್ಯಾಧಿಕಾರಿ ಹರ್ಷಿತ ಅವರು ಕ್ಷಯ ರೋಗ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಸಮಿತಿಯ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ನಿರ್ಣಯಿಸಲಾಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ, ಉಪಾಧ್ಯಕ್ಷ ಜನಾರ್ದನ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಷ್ಪ, ಪಂಚಾಯತ್ ಕಾರ್ಯದರ್ಶಿ ಸವಿತಾ, ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ರಘು ಪೂಜಾರಿ, ಶೀಲಾ ನಿರ್ಮಲ ವೆಗಸ್,ಜಯಂತಿ, ಗೀತ ಗಾಂಭೀರ್, ದಿನೇಶ್ ಪೂಜಾರಿ, ಜಯಪ್ರಸಾದ್, ಅಬ್ದುಲ್ ರಹೀಮಾನ್, ವೀರಕಂಬ ಗ್ರಾಮ ವ್ಯಾಪ್ತಿಯ ಆರೋಗ್ಯ ಸುರಕ್ಷಣಾಧಿಕಾರಿ ಜ್ಯೋತಿ ಕೆ ಏನ್,ಆಶಾ ಸುಗಮಕಾರರಾದ ಶೋಭಾ,ಆಶಾ ಕಾರ್ಯಕರ್ತೆಯರಾದ ಸ್ನೇಹಲತ ಶೆಟ್ಟಿ, ಶಶಿಕಲಾ ಮೊದಲಾದವರು ಭಾಗವಹಿಸಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter