ಬಂಟ್ವಾಳ: ರಾಜ್ಯಮಟ್ಟದ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಶಾಲೆಯ ನಿನಾದ್ ಕೈರಂಗಳನಿಗೆ ಪ್ರಥಮ ಸ್ಥಾನ

ಬಂಟ್ವಾಳ: ವಿಜಯಪುರದ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಶಿರಸಿ ಇಲ್ಲಿದೆ ನಡೆದ ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನ ಕರ್ನಾಟಕ 2024 ಕಾರ್ಯಕ್ರಮದಡಿಯಲ್ಲಿ ರಾಜ್ಯ ಮಟ್ಟದ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದ “ಭಗವದ್ಗೀತೆಯಿಂದ ಸಾಮಾಜಿಕ ಸಾಮರಸ್ಯ” ಎಂಬ ವಿಷಯದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ನಿನಾದ್ ಕೈರಂಗಳ ಭಾಷಣ ಮಾಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರಿಗೆ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಹಾಗೂ ಅಧ್ಯಾಪಕೇತರರು ಅಭಿನಂದಿಸಿದರು.