ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಮಠ ಅರ್ಚಕರ ಮನೆಯಲ್ಲಿ ಕಳವು
ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರ ಮನೆಯಲ್ಲಿ ಕಳವು ಆಗಿದೆ. ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ಆನಂದ ಭಟ್ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗ ಮುರಿದಿರುವುದು ಕಂಡು ಬಂದಿದೆ. ಮನೆಯ ಒಳಗೆ ಹೋಗಿ ನೋಡಿದಾಗ ಮನೆಯಲ್ಲಿದ್ದ ಸುಮಾರು 25 ಸಾವಿರ ರೂ. ಹಣ ಮತ್ತು 1.15 ಲಕ್ಷ ರೂ. ಮೌಲ್ಯದ ಸುಮಾರು 23 ಗ್ರಾಂ ಚಿನ್ನಾಭರಣ ಕಳವು ಆಗಿದೆ.
ಈ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಹಾಗೂ ತನಿಖಾ ತಂಡದೊಂದಿಗೆ ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.