Published On: Wed, Dec 25th, 2024

ಬಂಟ್ವಾಳ: ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಸಂಸ್ಕೃತಿ ಉತ್ಸವ ಕಾರ್ಯಕ್ರಮ

ಬಂಟ್ವಾಳ: ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ಕುಕ್ಕಾಜೆಯಲ್ಲಿ ಏರ್ಪಡಿಸಲಾದ 3 ದಿನಗಳ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ,ಉಪನ್ಯಾಸಕ ಜಯಾನಂದೆ ಪೆರಾಜೆ ಅವರು ಭಾಗವಹಿಸಿ ಮಾತನಾಡಿದರು, ಭಾರತೀಯ ಸಂಸ್ಕೃತಿಯು ಕೃಷಿ ಸಂಸ್ಕೃತಿಯ ಮೂಲದಿಂದ ಬೆಳೆದು ಬಂದಿದೆ. ಬಹುಭಾಷಾ ಸಂಸ್ಕೃತಿ ಇದ್ದರೂ ಏಕಭಾವವನ್ನು ಹೊಂದಿದೆ. ವಿವಿಧ ಹಬ್ಬಗಳ ಆಚರಣೆ ಹಾಗೂ ಜಾನಪದ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.

ಮಂಚಿ ಹಿ.ಪ್ರಾ. ಶಾಲಾ ಸಂಚಾಲಕ ನೂಜಿಬೈಲು ನಾರಾಯಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಹಿರಿಯ ನ್ಯಾಯವಾದಿ ಚಂದ್ರಶೇಖರ ಕೆ.ವಿ. ಸಭಾದ್ಯಕ್ಷತೆ ವಹಿಸಿದ್ದರು.
ಆಕಾಶವಾಣಿ ಕಲಾವಿದೆ ಗಮಕಿ ಮಂಜುಳಾ ಸುಬ್ರಮಣ್ಯ ,ಕವಯಿತ್ರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ವಿಜಯಾಶೆಟ್ಟಿ ಸಾಲೆತ್ತೂರು, ಲೇಖಕಿ ಅನಿತಾ ನರೇಶ್ ಮಂಚಿ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಭಜನಾ ಮಂಡಳಿ ಅಧ್ಯಕ್ಷ ಗಣೇಶ ಐತಾಳ್ ಸ್ವಾಗತಿಸಿದರು. ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಪ್ರಸ್ತಾವನೆ ಗೈದರು. ಶೈಲಜಾ ಮತ್ತು ಶಿಕ್ಷಕ ಉಮಾನಾಥ ರೈ ಸನ್ಮಾನಪತ್ರ ವಾಚಿಸಿದರು. ಬಾಲಕೃಷ್ಣ ಶೆಟ್ಟಿ ನಿರೂಪಿಸಿದರು.

ಇನ್ನು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗಮಕ ವಿದ್ಯಾರ್ಥಿಗಳಿಂದ ಸಮೂಹ ಗಾಯನ ಮತ್ತು ಕುಮಾರ ವ್ಯಾಸ ಭಾರತದಿಂದ ಆಯ್ದ ಸೌಗಂಧಿಕಾ ಸಂಧಿ ಗಮಕ ವಾಚನ, ವ್ಯಾಖ್ಯಾನ ನಡೆಯಿತು. ಮಂಜುಳಾ ಸುಬ್ರಮಣ್ಯ ವಾಚನ ಮಾಡಿ ಸರ್ಪಂಗಳ ಈಶ್ವರ ಭಟ್ ವ್ಯಾಖ್ಯಾನಿಸಿದರು. ಸಮಾರೋಪ ಸಮಾರಂಭವು ಮಂಚಿ ಗ್ರಾ.ಪಂ ಅಧ್ಯಕ್ಷ ಜಿ.ಎಂ. ಇಬ್ರಾಹಿಂ ಅಧ್ಯಕ್ಷತೆಯಲ್ಲಿ ನಡೆಯಿತು. ಅತಿಥಿಗಳಾಗಿ ಪಿ.ರಮೇಶರಾವ್ ಪತ್ತುಮುಡಿ , ನಿಶ್ಚಲ್ ಜಿ ಶೆಟ್ಟಿ ಕಲ್ಲಾಡಿ ಅತಿಥಿಗಳಾಗಿದ್ದರು.

ಆಕಾಶವಾಣಿ ಕಲಾವಿದೆ ಮಂಜುಳಾ ಗುರುರಾಜ್ ರಾವ್ ಇರಾ ಇವರಿಂದ ಪಾದುಕಾ ಪಟ್ಟಾಭಿಷೇಕ ಹರಿಕಥೆ, ಶಿವರಂಜಿನಿ ಕಲಾಕೇಂದ್ರ ಪೊಳಲಿ ಇವರಿಂದ ಸಾಂಸ್ಕೃತಿಕ ವೈವಿಧ್ಯ, ಶಾರದಾ ಎಸ್ ರಾವ್ ಬಳಗದವರಿಂದ ಸ್ಯಾಕ್ಸೋ ಫೋನ್ ವಾದನ ಜನಮೆಚ್ಚುಗೆ ಪಡೆಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter