ಬಂಟ್ವಾಳ ತಾ.ಪಂ.ಕಚೇರಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ
ಬಂಟ್ವಾಳ : ಇಲ್ಲಿಯ ತಾಲೂಕು ಪಂಚಾಯತ್ ನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಚಿನ್ ಕುಮಾರ್ ಅವರುಧ್ವಜಾರೋಹಣವನ್ನು ನೆರವೇರಿಸಿದರು.

ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕರಾದ ನೋಣಯ್ಯ ನಾಯ್ಕ್ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಬಂಟ್ವಾಳ ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷರಾದ ಜಯಂತಿ ವಿ. ಪೂಜಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಸುನೀತಾ, ತಾಲೂಕು ವ್ಯವಸ್ಥಾಪಕರಾದ ಪ್ರಕಾಶ್ ಪಿ., ತಾಲೂಕು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.