ಚಿಕ್ಕಬಳ್ಳಾಪುರ: ಮಹಿಳೆಯ ಮೇಲೆ ಹಲ್ಲೆ ಮಾಡಿ ಮಾಂಗಲ್ಯ ಸರ ಕದ್ದೊಯ್ದ ಕಳ್ಳರು

ಚಿಕ್ಕಬಳ್ಳಾಪುರ: ಮಹಿಳೆಯ ಮೇಲೆ ಹಲ್ಲೆ ಮಾಡಿ ಮಾಂಗಲ್ಯ ಸರ ಕಳ್ಳರು ಕದ್ದೊಯ್ದ ಘಟನೆ ಬಾಗೇಪಲ್ಲಿ ತಾಲೂಕಿನ ಗಡಿದಂ ಗ್ರಾಮದಲ್ಲಿ ನಡೆದಿದೆ. ವ್ಯಾಪಾರ ಮಾಡುವ ಸೋಗಿನಲ್ಲಿ ಚಿಲ್ಲರೆ ಅಂಗಡಿಗೆ ಆಗಮಿಸಿ ಈ ಕೃತ್ಯ ಮಾಡಿದ್ದಾನೆ. ಅನಸೂಯಮ್ಮ ಎಂಬ ಮಹಿಳೆಯ ಸರವನ್ನು ಕಳ್ಳತನ ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಅನಸೂಯಮ್ಮ ಅವರ ಸರ ಕದ್ದಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.