Published On: Wed, Jan 29th, 2025

ಶೌರ್ಯ ವಿಪತ್ತು ನಿರ್ವಹಣ  ಘಟಕ ಕಲ್ಲಡ್ಕ  ವತಿಯಿಂದ  ಶ್ರಮದಾನ ಸೇವೆ ಹಾಗೂ ಮಾಸಿಕ ಸಭೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ  ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ  ಬೋಳಂತೂರು  ಗ್ರಾಮದ ನಾರಂಕೋಡಿ ಅಂಗನವಾಡಿ ಕೇಂದ್ರದಲ್ಲಿ  ಜರಗಿತು.


ಅಂಗನವಾಡಿ ಕೇಂದ್ರದಿಂದ ಕಲ್ಲಡ್ಕ ಶೌರ್ಯ ವಿಪತ್ತು ಘಟಕಕ್ಕೆನೀಡಿರುವ ಮನವಿಗೆ ಸ್ಪಂದಿಸಿ  ಘಟಕದ ಸದಸ್ಯರು  ಅಂಗನವಾಡಿ ಕೇಂದ್ರದ ಸುತ್ತ  ಪರಿಸರ ಸ್ವಚ್ಛ ಕಾರ್ಯ ಮಾಡಿದರು.
ಸ್ವಚ್ಛತಾ ಕಾರ್ಯಕ್ರಮದ ಸಂರ್ಭದಲ್ಲಿ ಬೋಳಂತೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಬಶೀರ್ ಭೇಟಿ ನೀಡಿ ಪ್ರೋತ್ಸಾಹಿಸಿದರು.
ಕಲ್ಲಡ್ಕ ಶೌರ್ಯ ಘಟಕ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರಬೆಟ್ಟು, ಘಟಕದ ಸಂಯೋಜಕಿ ವಿದ್ಯಾಬೊಂಡಾಲ,ಸದಸ್ಯರುಗಳಾದ ತುಳಸಿ, ಸಂತೋಷ್ ಬೊಲ್ಪೊಡಿ ,ಸತೀಶ್,ಗಣೇಶ್,ಚಿನ್ನಾ ಕಲ್ಲಡ್ಕ, ಮೊದಲಾದವರು ಭಾಗವಹಿಸಿದ್ದರು.
ಶ್ರಮದಾನದ ಬಳಿಕ ತಿಂಗಳ ಮಾಸಿಕ ಸಭೆ ನಡೆಸಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter