Published On: Thu, Jan 30th, 2025

ಗೋಳ್ತಮಜಲು: ಮಲತ್ಯಾಜ್ಯ ಘಟಕ, ನರಿಕೊಂಬು: ಎಂಆರ್‌ಎಫ್ ಘಟಕಕ್ಕೆ ದ.ಕ.ಜಿ.ಪಂ. ಉಪಕಾರ್ಯದರ್ಶಿ ಭೇಟಿ

ಬಂಟ್ವಾಳ: ದ.ಕ.ಜಿ.ಪಂ. ನ ಉಪಕಾರ್ಯದರ್ಶಿಗಳಾದ ಜಯಲಕ್ಷ್ಮೀ ಕೆಎಎಸ್ ಅವರು ಗುರುವಾರ  ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲತ್ಯಾಜ್ಯ ಘಟಕ ಹಾಗೂ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಆರ್‌ಎಫ್ ಘಟಕಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ಸಂದರ್ಭದಲ್ಲಿ ಅವರು ಆಡಳಿತ ಮತ್ತು ತಾಂತ್ರಿಕ ಸಮಿತಿಯ ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದರು.

ಸಮಿತಿ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ರಘುನಾಥ್, ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗುರುದತ್ತ್, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ನಟೇಶ್,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಜಗದೀಶ್ ನಿಂಬಲ್ಕರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ್ ಸಾಲ್ಯಾನ್, ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬಿ., ಸಹಾಯಕ ನಿರ್ದೇಶಕರಾದ ವಿಜಯ್ ಶಂಕರ್ ಆಳ್ವ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್, ಎಂಆರ್‌ಎಫ್ ಸಮಿತಿಯ ಸಿವಿಲ್ ಮತ್ತು ಮೆಕ್ಯಾನಿಕಲ್ ವಿಭಾಗದ ಸದಸ್ಯರು ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಎಸ್‌ಬಿಎಂ ಜಿಲ್ಲಾ ಸಮಾಲೋಚಕರಾದ ನವೀನ್, ಪವನ್ ಶೆಟ್ಟಿ, ಇತರರು ಉಪಸ್ಥಿತರಿದ್ದರು.

ಬಳಿಕ ಶೇಡಿಗುರಿ ಅಂಗನವಾಡಿ, ಬೊಂಡಾಲ ಜಗನ್ನಾಥ ಶೆಟ್ಟಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬೂದು ನೀರು ನಿರ್ವಹಣೆಯ ಕಾಮಗಾರಿ ಪರಿಶೀಲನೆ ನಡೆಸಿದರು.  

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter