ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ, ಓರ್ವ ಯುವಕ ಸಾವು

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಒಬ್ಬ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ನೆನ್ನೆ (ಫೆ.4) ನಡೆದಿದೆ. ನೋಂದಣಿ ಸಂಖ್ಯೆ ಕೆಎ-21-ಬಿ-4611 ಸಂಖ್ಯೆಯ ರಿಕ್ಷಾವನ್ನು ಮೊಹಮ್ಮದ್ ತೌಫಿಕ್ ಎಂಬ ವ್ಯಕ್ತಿ ಚಲಾಯಿಸುತ್ತಿದ್ದರು. ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಬೈಕ್ಗೆ ಢಿಕ್ಕಿ ಹೊಡೆದಿದ್ದಾರೆ. ಸವಾರ ಚೇತನ್ ಕುಮಾರ್ ಬೈಕ್ ಹೊಡೆಸುತ್ತಿದ್ದ, ಅವರ ಹಿಂದೆ ಆತನ ಸ್ನೇಹಿತ ಮನೀಶ್ ಕೂತ್ತಿದ್ದ, ಈ ವೇಳೆ ರಭಸವಾಗಿ ಬಂದ ರಿಕ್ಷಾ ಡಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಬೈಕ್ ಸವಾರರು ರಸ್ತೆಗೆ ಬಂದಿದ್ದಾರೆ.
ತಕ್ಷಣ ಇಬ್ಬರನ್ನು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಚೇತನ್ ಮೃತಪಟ್ಟಿದ್ದಾರೆ. ಮನೀಶ್ ಕೂಡ ಗಾಯಗೊಂಡಿದ್ದಾರೆ. ಆಟೋ ರಿಕ್ಷಾ ಚಾಲಕ ಮೊಹಮ್ಮದ್ ತೌಫಿಕ್ ಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.