ಒಂದು ಮುಡಾ ಪ್ರಕರಣದಿಂದ ಬಚಾವ್​​ ಆಗಿರುವ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಮುಡಾ ಪ್ರಕರಣ ಸುತ್ತಿಕೊಂಡಿದೆ. ಮೈಸೂರಿನ ಕೆಸರೆ ಗ್ರಾಮದ ಜಮೀನಿಗೆ ಸಂಬಂಧಪಟ್ಟಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಹಗರಣದಿಂದ ಕ್ಲಿನ್ ಚೀಟ್​ ಪಡೆದಿರುವ ಸಿಎಂಗೆ ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಎನ್​ಆರ್ ರಮೇಶ್ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.

ವಿಜಯನಗರ ಎರಡನೇ ಹಂತದ ಬಡಾವಣೆ ನಿರ್ಮಾಣ ಮಾಡುವುದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೈಸೂರಿನ ಹಿಣಕಲ್ ಗ್ರಾಮದ ಸರ್ವೆ ನಂಬರ್ 70/4 ಎ ಜಾಗವನ್ನು ಸ್ವಾಧೀನಪಡಿಸಿಕೊಂಡಿತ್ತು. ಆ ಭೂಮಿಯನ್ನು ಡಿ ನೋಟಿಫಿಕೇಶನ್ ಮಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಉಲ್ಲಂಘಿಸಿದ್ದಾರೆ. ಅಲ್ಲದೆ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

By suddi9

Leave a Reply

Your email address will not be published. Required fields are marked *