Published On: Thu, Feb 20th, 2025

ಮತ್ತೊಂದು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ

ಒಂದು ಮುಡಾ ಪ್ರಕರಣದಿಂದ ಬಚಾವ್​​ ಆಗಿರುವ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಮುಡಾ ಪ್ರಕರಣ ಸುತ್ತಿಕೊಂಡಿದೆ. ಮೈಸೂರಿನ ಕೆಸರೆ ಗ್ರಾಮದ ಜಮೀನಿಗೆ ಸಂಬಂಧಪಟ್ಟಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಹಗರಣದಿಂದ ಕ್ಲಿನ್ ಚೀಟ್​ ಪಡೆದಿರುವ ಸಿಎಂಗೆ ಮುಡಾ ಆಸ್ತಿಯ ಅಕ್ರಮ ಡಿನೋಟಿಫಿಕೇಶನ್ ಸಂಬಂಧ ಸಿದ್ದರಾಮಯ್ಯ ಹಾಗೂ ಬಸವೇಗೌಡ ವಿರುದ್ಧ ತನಿಖೆಗೆ ಅನುಮತಿ ನೀಡಬೇಕು ಎಂದು ಕೋರಿ ಬಿಜೆಪಿ ಮುಖಂಡ ಎನ್​ಆರ್ ರಮೇಶ್ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.

ವಿಜಯನಗರ ಎರಡನೇ ಹಂತದ ಬಡಾವಣೆ ನಿರ್ಮಾಣ ಮಾಡುವುದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮೈಸೂರಿನ ಹಿಣಕಲ್ ಗ್ರಾಮದ ಸರ್ವೆ ನಂಬರ್ 70/4 ಎ ಜಾಗವನ್ನು ಸ್ವಾಧೀನಪಡಿಸಿಕೊಂಡಿತ್ತು. ಆ ಭೂಮಿಯನ್ನು ಡಿ ನೋಟಿಫಿಕೇಶನ್ ಮಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಉಲ್ಲಂಘಿಸಿದ್ದಾರೆ. ಅಲ್ಲದೆ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter