ಮಂಗಳೂರು ನಗರದಲ್ಲಿ ಬೈಕ್ ಸವಾರನಿಗೆ ಗುದ್ದುವ ಬದಲು ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್​ ಮೇಲೆ ನೇತಾಡಿರುವ ವಿಡಿಯೋ ವೈರಲ್​​ ಆಗಿದೆ.

ಮುರಳಿ ಪ್ರಸಾದ್ ಎನ್ನುವಾತ ಬೈಕ್​ ಮೇಲೆ ತೆರಳತ್ತಿದ್ದು, ಈತನಿಗೆ ಗುದ್ದಿ ಹತ್ಯೆ ಮಾಡುವ ಪ್ಲ್ಯಾನ್ ಇತ್ತು. ಆದ್ರೆ, ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಕಾರು ಗುದ್ದಿದೆ. ಪರಿಣಾಮ ಮಹಿಳೆ ಕಾಂಪೌಂಡ್​ ಮೇಲೆ ಬಿದ್ದು ನೇತಾಡಿದ್ದಾಳೆ. ಬಳಿಕ ಸ್ಥಳೀಯರು ಓಡೋಡಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಕಾರು ಚಾಲಕ ಸತೀಶ್ ಕುಮಾರ್​​ ಈ ಕೃತ್ಯ ಎಸಗಿದ್ದಾನೆ. ಅದೃಷ್ಟವಶಾತ್​ ಮಹಿಳೆ ಬದುಕಿದ್ದಾಳೆ.

By suddi9

Leave a Reply

Your email address will not be published. Required fields are marked *