ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ ೨೦೨೫-೨೦೨೬ನೇ ಸಾಲಿನ ನೂತನ  ಅಧ್ಯಕ್ಷರಾಗಿ ಬಿ.ರಮೇಶ್ ಸಾಲ್ಯಾನ್ ಸಂಚಯಗಿರಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಪದಾಧಿಕಾರಿಗಳಾಗಿ ಉಪಾಧ್ಯಕ್ಷೆಯಾಗಿ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಯಾದವ ಕುಲಾಲ್ ಅಗ್ರಬೈಲು, ಕೋಶಾಧಿಕಾರಿಯಾಗಿ ಸೋಮನಾಥ ಸಾಲ್ಯಾನ್ ರಾಮನಗರ, ಜೊತೆ ಕಾರ್ಯದರ್ಶಿಯಾಗಿ ಮೀನಾಕ್ಷಿ ಪದ್ಮನಾಭ ಅಲೆತ್ತೂರು ಮತ್ತು ಸತೀಶ್ ಸಂಪಾಜೆ, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ಕುಲಾಲ್ ಬಂಟ್ವಾಳ, ಸೇವಾದಳಪತಿಯಾಗಿ ಜಯಂತ್ ಕುಲಾಲ್ ಅಗ್ರಬೈಲ್, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಶಾ ಗಿರಿಧರ್ ಪಾಪಿನಕೋಡಿ ಇವರು ಆಯ್ಕೆಯಾಗಿದ್ದಾರೆ ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *