ಬಂಟ್ವಾಳ: ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ  ಜೂ. 20,21,22 ರಂದು ಮೂರುದಿನಗಳ ಕಾಲ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುವ “ತುಳುವೆರೆನ ತುಳುನಾಡ ಸಂತೆ” ಮಾವು ಹಲಸುಗಳೊಂದಿಗೆ ಸಾಹಿತ್ಯ ಸಾಂಸ್ಕೃತಿಕ ರಂಗಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಗುರುವಾರ ನಡೆಯಿತು.


ಶ್ರೀದೇವರಿಗೆ ಪೂಜೆ ನೆರವೇರಿಸಿ,ಬಳಿಕ ತುಳುಕೂಟದ ಅಧ್ಯಕ್ಷರಾದ ಸುದರ್ಶನ್ ಜೈನ್ ಆಮಂತ್ರಣ ಬಿಡುಗಡೆಗೊಳಿಸಿದರು. ಈ ಸಂಧರ್ಭದಲ್ಲಿ ತುಳುಕೂಟ ಬಂಟ್ವಾಳದ ಕಾರ್ಯದರ್ಶಿ ಎಚ್ಕೆ ನಯನಾಡು, ಕೋಶಾದಿಕಾರಿ ಸುಭಾಶ್ಚಂದ್ರ ಜೈನ್,ಉಪಾಧ್ಯಕ್ಷ ಕೆ.ಸೀತಾರಾಮ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ದೇವಪ್ಪ ಕುಲಾಲ್ ಪಂಜಿಕಲ್ಲು, ಸಮಿತಿ ಸಂಚಾಲಕರಾದ ಸೇಷಪ್ಪ ಮಾಸ್ಟರ್, ಸುಕುಮಾರ್ ಬಂಟ್ವಾಳ, ನಾರಾಯಣ ಸಿ.ಪೆರ್ನೆ, ಪರಮೇಶ್ವರ ಮೂಲ್ಯ, ಮೋಹನ್ ಶೆಟ್ಟಿ ಪಂಜಿಕಲ್ಲು, ಚಂದ್ರಶೇಖರ್ ಗಟ್ಟಿ, ಸತೀಶ್ ಕುಮಾರ್ ಕಾರ್ತಿಕ್, ಸನ್ಮತಿ ಜೆ.ಜೈನ್ ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *