ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಬಿವೃದ್ಧಿ ಯೋಜನೆ ಬಿ ಸಿ.ಟ್ರಸ್ಟ್ (ರಿ.)ವಿಟ್ಲ ಇದರ ಮುಡಿಪು ವಲಯದ ವತಿಯಿಂದ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಜರಗಿತು.

ಶಾಲಾ ಸಂಚಾಲಕರಾದ ಸುಬ್ರಮಣ್ಯ ಭಟ್ ರವರು ಶಾಲಾ ಆವರಣದಲ್ಲಿ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಗ್ರಾಮಾಭಿವೃದ್ಧಿ ಯೋಜನೆಯವಲಯಾಧ್ಯಕ್ಷರಾದ ನವೀನ್ ಚಂದ್ರ, ನಿಕಟ ಪೂರ್ವ ಅಧ್ಯಕ್ಷರಾದ ಭಾಸ್ಕರ್, ಒಕ್ಕೂಟ ಅಧ್ಯಕ್ಷರಾದ ವಿನೋದ್, ಶಾಲಾ ಶಿಕ್ಷಕರು, ಶೌರ್ಯವಿಪತ್ತು ನಿರ್ವಹಣ ಘಟಕದ ಅಧ್ಯಕ್ಷರಾದ ರವೀಂದ್ರ,ವಲಯ ಮೇಲ್ವಿಚಾರಕರಾಕಿ ಪ್ರೇಮಲತ, ವಿಪತ್ತು ಘಟಕದ ಸದಸ್ಯರು, ವಲಯದ ಸೇವಾ ಪ್ರತಿನಿಧಿಗಳು, ಶಾಲಾಬಿವೃದ್ಧಿ ಸಮಿತಿ ಸದಸ್ಯರು ಉಪಸ್ಥತಿರಿದ್ದರು.
