ಪಿಲಿಂಗಾಲು: ಶ್ರೀ ಗುರು ರಾಘವೇಂದ್ರ ಸ್ವಾಮಿ 354ನೇ ಆರಾಧನಾ ಮಹೋತ್ಸವ
ಬಂಟ್ವಾಳ: ತಾಲೂಕಿನ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ “ಶ್ರೀ ಗುರು ರಾಘವೇಂದ್ರ ಸ್ವಾಮಿ” ಅವರ 354ನೇ ಆರಾಧನಾ ಮಹೋತ್ಸವ ಸೋಮವಾರ ನಡೆಯಿತು. ಬೆಳಿಗ್ಗೆ ಗಂಟೆ 8.30ರಿಂದ ಗುರುವರ್ಯರ ವಿಗ್ರಹಕ್ಕೆ ಪಂಚಾಮೃತ ಸಹಿತ ಕಲಶಾಭಿಷೇಕ, ಮಧ್ಯಾಹ್ನ ವಿಶೇಷ ಪೂಜೆ ಮತ್ತು ಮಂತ್ರಾಕ್ಷತೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ ಭಜನಾ ಸಂಕೀರ್ತನೆ ಆರಂಭಗೊಂಡು ಬಳಿಕ ರಾತ್ರಿ ದೇವರಿಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಉತ್ಸವ ಸಮಿತಿ ಮಾಜಿ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಪಿಲಾತಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಎಂ.ಬೂಬ ಸಪಲ್ಯ ಮುಂಡಬೈಲು, ಭಜನಾ ಸಮಿತಿ ಅಧ್ಯಕ್ಷ ಜಯ ಪೂಜಾರಿ, ಅತ್ತಾವರ ಶ್ರೀ ಉಮಾಮಹೇಶ್ವರ ದೇವಳದ ಮೊಕ್ತೇಸರ ಜನಾರ್ದನ ಅರ್ಕುಳ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ನಾಗೇಶ ಕಲ್ಲಡ್ಕ, ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ನಿವೃತ್ತ ಅಧೀಕ್ಷಕ ಬಿ.ಅಚ್ಚುತ ಭಂಡಾರಿಬೆಟ್ಟು, ಪುರಸಭಾ ನಾಮನಿರ್ದೇಶಿತ ಸದಸ್ಯ ಜಗದೀಶ ಕುಂದರ್, ನಿವೃತ್ತ ಪಿಡಿಒ ವೇದವ ಗಾಣಿಗ, ಉದ್ಯಮಿ ಭುವನೇಶ್ ಮೊಗರ್ನಾಡು, ಬಾಲಕೃಷ್ಣ ಸೆರ್ಕಳ, ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜಯಶ್ರೀ ಅಶೋಕ್, ಪ್ರಮುಖರಾದ ಕೆ.ನಾರಾಯಣ ಸಪಲ್ಯ ಕಣ್ಣೂರು, ಕೆ.ಬಾಬು ಸಪಲ್ಯ ವಗ್ಗ, ಮೋಹನ್ ಕೆ.ಶ್ರೀಯಾನ್ ರಾಯಿ, ಜಯರಾಮ ಕುಲಾಲ್ ಉರುಡಾಯಿ, ಚಂದ್ರಶೇಖರ ಶೆಟ್ಟಿ ವಾಮದಪದವು, ಚಿದಾನಂದ ನಾಯ್ಕ್ ಪಿಲಿಂಗಾಲು, ದೇವಿಪ್ರಸಾದ್ ದೇವಂದಬೆಟ್ಟು ಮತ್ತಿತರರು ಇದ್ದರು.



