ಬಂಟ್ವಾಳ: ಮುಂಬರುವ  ಜಿ.ಪಂ.ತಾ.ಪಂ.,ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತೆಯರು ಕೂಡ ಬೂತ್ ಮಟ್ಟದಲ್ಲಿ  ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ  ಸಹಕಾರಿಯಾಗಬೇಕು ಎಂದು ಮಾಜಿ ಶಾಸಕಿ,ಮಹಿಳಾ ಕಾಂಗ್ರೆಸ್ ನ ರಾಜ್ಯಾಧ್ಯಕ್ಷೆ  ಸೌಮ್ಯ ರೆಡ್ಡಿ ಕರೆ ನೀಡಿದರು.


ಮಂಗಳವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ‌  ಪಾಣೆಮಂಗಳೂರು‌ ಮತ್ತುಬಂಟ್ವಾಳ ಬ್ಲಾಕ್  ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದ ಜನರ ಅನುಕೂಲ ಮತ್ತು ಮುಂದಿನ ಪೀಳಿಗೆಗೂ ಒಳ್ಳೆಯದಾಗಬೇಕೆಂಬ   ಸದುದ್ದೇಶದಿಂದ ಜಾರಿಗೆ ತಂದಿರುವ ಪಂಚಗ್ಯಾರಂಟಿ ಯೋಜನೆ ರಾಜ್ಯದಲ್ಲಿ ಕ್ರಾಂತಿಯನ್ನೇ ಸೃಷ್ಠಿಸಿದೆ ಎಂದರು.


ಮಹಿಳೆಯರು ಸ್ವಾಭಿಮಾನದ ಬದುಕು ಸಾಗಿಸುವ ನಿಟ್ಟಿನಲ್ಲಿ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಮಾನಸಿಕವಾಗಿಯು ಸಧೃಡರಾಗಿ ಪಕ್ಷದ ಚಟುವಟಿಕಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದ ಅವರುದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ  ಪಕ್ಷ ಸಂಘಟನೆಯಲ್ಲಿ ಮಹಿಳೆಯರು ಕುಇಡ ಪ್ರಮುಖ ಪಾತ್ರ ವಹಿಸುತ್ತಿರುವುದು ಅಭಿನಂದನೀಯವಾಗಿದೆ ಎಂದರು.


ಸಭಾಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಮಾತನಾಡಿ,  ಮಹಿಳೆಯರ ಕೈಗೆ  ಅಧಿಕಾರವನ್ನು ಕೊಟ್ಟಲ್ಲಿ ಪ್ರಾಮಾಣಿಕ ಮತ್ತು ಸಮರ್ಥವಾಗಿ ನಿಭಾಯಿಸುತ್ತಾರೆ ಎನ್ನುವುದಕ್ಕೆ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರು ಒಂದು ಒಳ್ಳೆ ನಿದರ್ಶನವಾಗಿದ್ದಾರೆ ಎಂದರು.


ಮಾಜಿ ಪ್ರಧಾನಿ ದಿವಂಗತ ರಾಜೀವಗಾಂಧಿಯವರ ಪಂಚಾಯತ್ ರಾಜ್ ವಿಕೇಂದ್ರಿಕರಣ ಪರಿಕಲ್ಪನೆಯಿಂದಾಗಿ ದೇಶದ ಗ್ರಾಮೀಣಭಾಗದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಕಾಣುವಂತಾಗಿದೆ. ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆಪ್ರಧಾನಿಯಾಗುವ ಎಲ್ಲಾ ಅವಕಾಶವಿದ್ದರೂ ತ್ಯಾಗಮಾಡಿದ್ದರು ಎಂದ ಅವರು ಮಹಿಳೆಯರಿಗೆ ವಿವಿಧ ಸ್ತರಗಳಲ್ಲಿ   ಹೆಚ್ಚು,ಹೆಚ್ಚು  ಅವಕಾಶ ನೀಡಿದ್ದರೆ ಅದು‌ಕಾಂಗ್ರೆಸ್ ಪಕ್ಷ ಮಾತ್ರ ಎಂದರು.


ಗೇರು ನಿಗಮದ ಅಧ್ಯಕ್ಷೆ ಮಮತಾಗಟ್ಟಿ,ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನಿಕಟಪೂರ್ವ ಅಧ್ಯಕ್ಷೆ ಶಾಲೆಟ್ ಪಿಂಟೋ, ನಿಯೋಜಿತ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ,ನಿಯೋಜಿತಾ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ  ಕು.ಅಪ್ಪಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.


ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್ ,ಪಂಚ  ಗ್ಯಾರಂಟಿ ಯೋಜನಾ ಅನುಷ್ಠಾನ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ,ಮಾಜಿಜಿ.ಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ,ಪದ್ಮಶೇಖರ ಜೈನ್,ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ  ಅಶ್ವನಿಕುಮಾರ್ ರೈ ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ, ಬೂಡಾ ಅಧ್ಯಕ್ಷ  ಬೇಬಿಕುಂದರ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್,ಚಂದ್ರಶೇಖರ ಭಂಡಾರಿ,ಪಂಚ  ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಉಪಾಧ್ಯಕ್ಷ ನಾರಾಯಣ ನಾಯ್ಕ್,ಪಕ್ಷದ ಮುಖಂಡರಾದ ಅಬ್ಬಾಸ್ ಆಲಿ,ಪದ್ಮನಾಭರೈ,ಸುದೀಪ್ ಕುಮಾರ್ ರೈ
ನಮಿತಾರಾವ್, ನಮಿತಾ ಪೂಜಾರಿ,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಬಡಕಬೈಲ್ ಮೊದಲಾದವರು ವೇದಿಕೆಯಲ್ಲಿದ್ದರು.

ಇದೇ ವೇಳೆ ಮಹಿಳಾ ಕಾಂಗ್ರೆಸ್ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ,ನಿಯೋಜಿತ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ,ನಿಯೋಜಿತಾ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ  ಕು.ಅಪ್ಪಿ ಅವರನ್ನು ಅಭಿನಂದಿಸಲಾಯಿತು.
ಬಂಟ್ವಾಳ ಬ್ಲಾಕ್ ಮಹಿಳಾ  ಕಾಂಗ್ರೆಸ್ ಅಧ್ಯಕ್ಷೆಲವೀನಾ ವಿಲ್ಮಾ ಮೋರಸ್ ಸ್ವಾಗತಿಸಿದರು.ನ್ಯಾಯವಾದಿ ಶೈಲಜಾ ರಾಜೇಶ್ ಕಾರ್ಯಕ್ತಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *